ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..




‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm