ಬ್ರೇಕಿಂಗ್ ನ್ಯೂಸ್
11-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ದೇಶದಲ್ಲಿ ಇಂದು ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಎಂಬ ಎರಡು ಪದಗಳಷ್ಟೇ ತಾಂಡವವಾಡುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಬಡ, ಅಮಾಯಕ ಹೆಣ್ಮಕ್ಕಳನ್ನು ಮತಾಂತರಿಸಿ ನಾಲ್ಕು ಮುಸ್ಲಿಂ ಮಕ್ಕಳನ್ನು ಹೆರಿಸುವ ಯಂತ್ರ ಮಾಡುತ್ತಿದ್ದರೆ, ಇನ್ನೊಂದೆಡೆ ಸಾವಿರಾರು ಎಕರೆ ಜಮೀನು ಖರೀದಿಸಿ ಲ್ಯಾಂಡ್ ಜಿಹಾದ್ ಮಾಡಲಾಗುತ್ತಿದೆ. ಇದರ ವಿರುದ್ಧ ಹಿಂದು ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಕೇಶವ ಮೂರ್ತಿ ಹೇಳಿದರು.



ಇತ್ತೀಚೆಗೆ ಹಿಂದು ಸಮಾಜದ ಮೇಲಾಗುತ್ತಿರುವ ಅನ್ಯಾಯ, ದೌರ್ಜನ್ಯದ ವಿರುದ್ದ ಜನಜಾಗೃತಿಗಾಗಿ ಮುಡಿಪುವಿನಲ್ಲಿ ಗುರುವಾರ ನಡೆದ ಹಿಂದು ಜಾಗೃತಿ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಹಿಂದು ಸಮಾಜವನ್ನು ನುಂಗಿ ನೀರು ಕುಡಿಯಬಹುದು ಎಂದು ತಿಳಿದುಕೊಂಡಿದ್ದರೆ ಅದು ನಿಮ್ಮ ತಪ್ಪು ಕಲ್ಪನೆ. ನಮ್ಮ ಪೂರ್ವಜರಿಂದ ರಕ್ಷಿಸಿಕೊಂಡು ಬಂದಿರುವ ಹಿಂದು ಸಮಾಜವನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು. ಇತಿಹಾಸ ನೋಡಿದರೆ 2000 ಕ್ರೈಸ್ತ ಮಿಷನರಿಗಳು ಬಂದು 4% ರಷ್ಟು ಜನರನ್ನು ಮಾತ್ರ ಮತಾಂತಗೊಳಿಸಿದರು. ಮುಸ್ಲಿಮರು 600 ವರ್ಷಗಳ ಕಾಲ ಆಳಿದರೂ ಶೇ. 10% ಹಿಂದುಗಳನ್ನು ಮತಾಂತರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಯಾಕೆಂದರೆ ನಮ್ಮ ಪೂರ್ವಜರು ಹಿಂದು ಧರ್ಮದ ರಕ್ಷಣೆಗಾಗಿ ಅಷ್ಟು ಗಟ್ಟಿಯಾಗಿ ನಿಂತಿದ್ದರು. ಇನ್ನೂ ಸಾವಿರ ವರ್ಷ ಕಳೆದರೂ ನಮ್ಮ ಹಿಂದೂ ರಾಷ್ಟ್ರವನ್ನು ಪರಿವರ್ತನೆ ಮಾಡಲು ಸಾಧ್ಯವಿಲ್ಲ ಎಂದರು.
ತಾಂಟ್ರೆ ತಾಂಟ್ರೆ ಎಂದು ಹೇಳಿದಾತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಆತ ಹೇಳಿದ ಅಂತ ಹಿಂದು ಸಮಾಜ ಒಂದು ವೇಳೆ ತಾಂಟಿದರೆ ಏನಾಗುತ್ತದೆ ಎಂದು ಪೊಲೀಸರೇ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರ ಸೇವಿಕ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಮೀನಾಕ್ಷಿ ಭಗಿನಿ ಮಾತನಾಡಿ, ನಾವು ಮಕ್ಕಳನ್ನು ಝಾನ್ಸಿರಾಣಿ, ವಿವೇಕಾನಂದ, ಶಿವಾಜಿ ಮೊದಲಾದ ಮಹಾನ್ ವ್ಯಕ್ತಿಗಳಂತೆ ಬೆಳೆಸಬೇಕು. ಸ್ತ್ರೀ ಶಕ್ತಿಯೊಂದಿಗೆ ರಾಷ್ಟ್ರಭಕ್ತಿ ಮೆರೆದು ಬಲಿಷ್ಠ ರಾಷ್ಟ್ರ ಕಟ್ಟ ಬೇಕಾಗಿದೆ ಎಂದರು. ನಾವು ಸಂಘಟಿತರಾಗಿ ಜಾಗೃತರಾಗಬೇಕಾದ ಅಗತ್ಯವಿದೆ. ಹೆಣ್ಮಕ್ಕಳು ದೇವಿಯ ಸ್ವರೂಪ. ಇಂದಿನ ಕಾಲದಲ್ಲಿ ಮಕ್ಕಳು ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳಿಗೆ ಜೋತು ಬೀಳದೆ ಎಚ್ಚೆತ್ತುಕೊಳ್ಳಬೇಕು ಎಂದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm