ಬ್ರೇಕಿಂಗ್ ನ್ಯೂಸ್
12-02-21 04:53 pm Mangalore Correspondent ಕರಾವಳಿ
ಮಂಗಳೂರು, ಫೆ.12: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಆಗಿದ್ದ ಕನ್ನಡ ಚಿತ್ರನಟಿ ಪದ್ಮಜಾ ರಾವ್ ಇಂದು ಮಂಗಳೂರಿನ 5ನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಪದ್ಮಜಾ ರಾವ್ ಅವರನ್ನು ಬಂಧಿಸಿ, ಕರೆತರುವಂತೆ ಮಂಗಳೂರಿನ ಕೋರ್ಟ್ ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ವಾರೆಂಟ್ ನೀಡಿತ್ತು. ಅದರಂತೆ, ಪೊಲೀಸರು ಆಕೆಯನ್ನು ಬಂಧಿಸಿ ಮಾರ್ಚ್ 8ರಂದು ಕೋರ್ಟಿಗೆ ಹಾಜರು ಮಾಡಬೇಕಿತ್ತು. ಆದರೆ, ಪದ್ಮಜಾ ರಾವ್ ವಾರೆಂಟ್ ಆದೇಶದ ಪ್ರತಿ ಸಿಗುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮಂಗಳೂರಿನ ಕೋರ್ಟಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್, ನನಗೆ ನಮ್ಮ ಕಾನೂನು, ನ್ಯಾಯಾಂಗದ ಬಗ್ಗೆ ಸಂಪೂರ್ಣ ಭರವಸೆ ಇದೆ. ಜೊತೆಗೆ ನನ್ನ ಮೇಲೆ ನನಗೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನೀವೆಲ್ಲಾ ಕಾದು ನೋಡಬೇಕು, ಈಗ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ತುಳು ಚಿತ್ರನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ತನ್ನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾಗಿ ಪದ್ಮಜಾ ವಿರುದ್ಧ ಕೋರ್ಟಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ಚಾಲಿಪೋಲಿಲು ಚಿತ್ರಕ್ಕಾಗಿ ನಟಿಸಲು ಬಂದಿದ್ದ ವೇಳೆ ಪರಿಚಯ ಆಗಿದ್ದ ಪದ್ಮಜಾ, ಆಬಳಿಕ ಹಂತ ಹಂತವಾಗಿ ಹಣ ಪಡೆದಿದ್ದರು. ಹಣವನ್ನು ತನ್ನ ವೀರು ಟಾಕೀಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ಚೆಕ್ ಮೂಲಕ ನೀಡಿದ್ದಾಗಿ ವೀರೇಂದ್ರ ಹೇಳಿಕೊಂಡಿದ್ದರು.
Read: ತುಳು ಚಿತ್ರ ನಿರ್ದೇಶಕನಿಗೆ ವಂಚನೆ ; ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರು ಕೋರ್ಟಿನಿಂದ ಬಂಧನ ವಾರಂಟ್
Kannada actor Padmaja Rao Actress gets anticipatory bail in Mangalore court over cheque bounce case which was issued by the Mangalore 5th Additional Court. A case was filed by Tulu Director Veerendra Shetty Kavoor.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm