ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm