ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm