ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm