ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm