ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm