ಬ್ರೇಕಿಂಗ್ ನ್ಯೂಸ್
15-02-21 11:07 am Mangalore Correspondent ಕರಾವಳಿ
ಉಳ್ಳಾಲ: ಫೆ.15: ಕಾಲ ಮಿತಿಯನ್ನು ಮೀರಿ ನಡೆಸಲಾಗುತ್ತಿದ್ದ ಅದ್ಧೂರಿ ಹೈ ವೋಲ್ಟೇಜ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವನ್ನು ಪೊಲೀಸರು ಸ್ಥಗಿತಗೊಳಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಬಂಡಾರು ನೇತೃತ್ವದ ಪೊಲೀಸರ ತಂಡವು ನಿನ್ನೆ ರಾತ್ರಿ ನಡೆಯುತ್ತಿದ್ದ ಹೊನಲು ಬೆಳಕಿನ ಅದ್ದೂರಿ ಕ್ರಿಕೆಟ್ ಪಂದ್ಯಾಟವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದೆ. ದೇರಳಕಟ್ಟೆ ಫ್ರೆಂಡ್ಸ್ ಸರ್ಕಲ್ ನೆರಳಲ್ಲಿ ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಮೈದಾನದಲ್ಲಿ ಶನಿವಾರ ಸಂಜೆಯಿಂದ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಡಿಎಫ್ ಸಿ ಪ್ರೆಸೆಂಟ್ ಸೌಹಾರ್ದ ಟ್ರೋಫಿ - 2021 ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಪೊಲೀಸರು ರಾತ್ರಿ 11 ಗಂಟೆಯ ವರೆಗೆ ಸಮಯದ ಅವಕಾಶ ಕೊಟ್ಟಿದ್ದರು. ಆದರೆ, ಶನಿವಾರವೂ ರಾತ್ರಿ 12 ಗಂಟೆ ತನಕ ಕ್ರಿಕೆಟ್ ನಡೆದಿತ್ತು. ಆದಿತ್ಯವಾರ ಸಂಜೆ ಶುರುವಾದ ಕ್ರಿಕೆಟ್ ರಾತ್ರಿ 12 ಕಳೆದರೂ, ನಿಂತಿರಲಿಲ್ಲ. ಬಳಿಕ ರಾತ್ರಿ ಒಂದು ಗಂಟೆ ಆದರೂ ಫೈನಲ್ ಪಂದ್ಯಾಟ ಮುಗಿದಿರಲಿಲ್ಲ. ಸ್ಥಳಕ್ಕೆ ಬಂದ ಎಸಿಪಿ ರಂಜಿತ್ ಬಂಡಾರು ಮತ್ತು ಕೊಣಾಜೆ ಪೊಲೀಸರು ಸೆಮಿಫೈನಲ್ ಮತ್ತು ಫೈನಲ್ ಎರಡು ಪಂದ್ಯ ಬಾಕಿ ಉಳಿದಿರುವಂತೆ ವಿದ್ಯುತ್ ದೀಪಗಳನ್ನು ಬಂದ್ ಮಾಡಿಸಿ ಕ್ರಿಕೆಟ್ ಪಂದ್ಯಾಟವನ್ನು ಸ್ಥಗಿತಗೊಳಿಸಿದ್ದಾರೆ.
ಎಸಿಪಿ ಮಾತಿಗೆ ಬೆಲೆ ಕೊಟ್ಟ ಪಂದ್ಯ ಆಯೋಜಕರು ಇಂದು ಮಧ್ಯಾಹ್ನ 2 ಗಂಟೆಗೆ ಒಂದು ಸೆಮಿಫೈನಲ್ ಮತ್ತು ಫೈನಲ್ ಪಂದ್ಯವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಅಲ್ಲದೆ, ನೆರೆದಿದ್ದ ಬೃಹತ್ ಕ್ರಿಕೆಟ್ ಅಭಿಮಾನಿಗಳು ಮತ್ತು ಆಟಗಾರರನ್ನು ಶಾಂತಿಯುತವಾಗಿ ಮನೆಗೆ ತೆರಳಲು ಸೂಚಿಸಿದ್ದಾರೆ.
ಶನಿವಾರ ರಾತ್ರಿ ಔಪಚಾರಿಕ ಓವರ್ ಆರ್ಮ್ ಕ್ರಿಕೆಟ್ ಪಂದ್ಯದಲ್ಲಿ ಕೊಣಾಜೆ ಪೊಲೀಸ್ ಮತ್ತು ಉಳ್ಳಾಲ ಪೊಲೀಸರ ನಡುವೆ ಪಂದ್ಯ ನಡೆದು ಕೊಣಾಜೆ ಪೊಲೀಸರು ಜಯ ಗಳಿಸಿದ್ದರು.
8 ಓವರ್ ಗಳ ಪಂದ್ಯಾಟವನ್ನು ಆಯೋಜಕರು 6 ಓವರ್ ಗಳಿಗೆ ಸೀಮಿತಗೊಳಿಸಿದರೂ ಸಮಯಕ್ಕೆ ಸರಿಯಾಗಿ ಪಂದ್ಯ ಮುಗಿಸಲು ಸಾಧ್ಯವಾಗಿಲ್ಲ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಿ ಬಾಯ್ಸ್ ಅಳೇಕಳ ಮತ್ತು ಕೀರ್ತಿ ಸ್ಪೋರ್ಟಿಂಗ್ ಉಳ್ಳಾಲ ಬೈಲ್ ತಂಡಗಳು ಸೆಣಸಿ ಕೀರ್ತಿ ಉಳ್ಳಾಲಬೈಲ್ ತಂಡವು ಫೈನಲ್ ಪ್ರವೇಶಿಸಿತ್ತು. ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಯಂಗ್ ಪ್ರೆಂಡ್ಸ್ ಉರ್ವ ಮತ್ತು ಎನ್.ಎಮ್ ತಂಡಗಳು ಸೆಣಸಲು ರೆಡಿಯಾದಾಗಲೇ ಪೊಲೀಸರು ಎಂಟ್ರಿ ನೀಡಿ ಪಂದ್ಯವನ್ನು ಸ್ಥಗಿತಗೊಳಿಸಿದ್ದಾರೆ. ಒಂದು ಸೆಮಿಫೈನಲ್ ಮತ್ತು ಫೈನಲ್ ಪಂದ್ಯವು ಇಂದು ಮಧ್ಯಾಹ್ನ 2 ಗಂಟೆಗೆ ಗ್ರೀನ್ ಗ್ರೌಂಡಲ್ಲಿ ನಡೆಯಲಿದೆ.
Police Stop High Voltage cricket tournament held at Derlakatte for playing the game than the scheduled time.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm