ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm