ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.


ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm