ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.
ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm