ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm