ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm