ಬ್ರೇಕಿಂಗ್ ನ್ಯೂಸ್
17-02-21 01:10 pm Mangaluru Correspondent ಕರಾವಳಿ
ಬೆಳ್ತಂಗಡಿ, ಫೆ.17: ನಾಪತ್ತೆಯಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾಗಿ ತಿಳಿದು ಅಂತ್ಯಸಂಸ್ಕಾರ ನೆರವೇರಿಸಿ, ಉತ್ತರ ಕ್ರಿಯೆಗೆ ಸಿದ್ಧತೆ ನಡೆಸಿದ್ದ ಕುಟುಂಬಸ್ಥರಿಗೆ ಅಚ್ಚರಿ ಕಾದಿತ್ತು. ಸತ್ತು ಹೋಗಿದ್ದಾಗಿ ತಿಳಿದಿದ್ದ ವ್ಯಕ್ತಿ ದಿಢೀರ್ ಪ್ರತ್ಯಕ್ಷವಾಗಿ ಆಘಾತ ಮೂಡಿಸಿದ್ದಾರೆ.
ಗರ್ಡಾಡಿ ಗ್ರಾಮದ ನಿವಾಸಿ 60 ವರ್ಷದ ಶ್ರೀನಿವಾಸ ದೇವಾಡಿಗ ಜ.26 ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅವರ ಮಕ್ಕಳು ನಾಪತ್ತೆ ದೂರನ್ನೂ ಸಲ್ಲಿಸಿದ್ದರು. ಒಂದು ವಾರದ ಬಳಿಕ ಫೆ. 3ರಂದು ಓಡಿಲ್ನಾಳ ಗ್ರಾಮದ ಕುಲ್ಲುಂಜ ಕೆರೆಯಲ್ಲಿ ಅಪರಿಚಿತ ಶವ ತೇಲುತ್ತಿರುವುದು ಕಂಡುಬಂದಿತ್ತು. ಇದು ಶ್ರೀನಿವಾಸರದ್ದೇ ಶವ ಎಂಬ ಸುದ್ದಿ ಹರಡಿತ್ತು.

ಮೃತದೇಹವು ಕೊಳೆತ ಹಿನ್ನೆಲೆಯಲ್ಲಿ ಗುರುತು ಪತ್ತೆ ಹಚ್ಚಲು ಆಗಿರಲಿಲ್ಲ. ಕುಟುಂಬಸ್ಥರು ಬಳಿಕ ಶವ ಪಡೆದು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆನಂತರ ಉತ್ತರ ಕ್ರಿಯೆಗೆ ಮನೆಯಲ್ಲಿ ಸಿದ್ಧತೆ ನಡೆಸಲಾಗಿತ್ತು. ಆದರೆ 10 ದಿನಗಳ ಬಳಿಕ ನಾಪತ್ತೆಯಾಗಿದ್ದ ಶ್ರೀನಿವಾಸ ಜೀವಂತವಾಗಿ ಮನೆಗೆ ಮರಳಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಶ್ರೀನಿವಾಸ ಮದ್ಯ ಸೇವನೆ ಚಟಕ್ಕೆ ಬಿದ್ದಿದ್ದರು. ಕೆಲವೊಮ್ಮೆ ಮನೆಯಿಂದ ಹೊರ ಹೋಗಿ ಇರುತ್ತಿದ್ದ ಅವರು ವಾರಗಳ ಕಾಲ ಮನೆಗೆ ಬಾರದೇ ಎಲ್ಲೆಂದರಲ್ಲಿ ತಿರುಗಾಡುತ್ತಿದ್ದರು. ಮತ್ತೊಂದಷ್ಟು ದಿನಗಳ ಬಳಿಕ ಮನೆಗೆ ಮರಳುತ್ತಿದ್ದರು. ಆದರೆ ಈ ಬಾರಿ ಕೆರೆಯಲ್ಲಿ ಅಪರಿಚಿತ ಮೃತದೇಹ ಸಿಕ್ಕಾಗ ಮನೆಯವರು ಮತ್ತು ಊರವರು ಕೂಡ ಅದೇ ವ್ಯಕ್ತಿ ಎಂದುಕೊಂಡಿದ್ದರು. ಶ್ರೀನಿವಾಸ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಅಂತ ಶಂಕೆ ವ್ಯಕ್ತಡಿಸಿದ್ದರು. ಆದರೆ, ಈಗ ಶ್ರೀನಿವಾಸ ನಾನಿನ್ನೂ ಸತ್ತಿಲ್ಲ ಅನ್ನುತ್ತಲೇ ಎಂದಿನಂತೆ ಊರಿಗೆ ಮರಳಿದ್ದರೆ, ಕೆರೆಯಲ್ಲಿ ಸಿಕ್ಕ ಶವ ಯಾರದ್ದೆಂದು ಕುತೂಹಲಕ್ಕೆ ಕಾರಣವಾಗಿದೆ. ಈ ಊರಿನ ವ್ಯಕ್ತಿಯದ್ದಲ್ಲ ಎನ್ನುತ್ತಿರುವ ಗ್ರಾಮಸ್ಥರಿಗೆ ಈಗ ನಿಗೂಢ ವ್ಯಕ್ತಿಯ ಶವದ ಬಗ್ಗೆ ಆತಂಕ, ಕುತೂಹಲ ಹೆಚ್ಚಿದೆ.
After the funeral and post-funeral rites were conducted, the man they thought had died, came alive and knocked at their doors at Belthangady in Mangalore.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm