ಬ್ರೇಕಿಂಗ್ ನ್ಯೂಸ್
17-02-21 01:23 pm Mangaluru Correspondent ಕರಾವಳಿ
ಮಂಗಳೂರು, ಫೆ.17: ಮಂಗಳೂರಿನಲ್ಲಿ ನಾಲ್ಕು ಮೆಡಿಕಲ್ ಕಾಲೇಜು ಮುಖ್ಯಸ್ಥರನ್ನು ಗುರಿಯಾಗಿರಿಸಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ಇಡೀ ಕಾರ್ಯಾಚರಣೆಯನ್ನು ತುಂಬ ರಹಸ್ಯವಾಗಿ ಇರಿಸಿದ್ದಾರೆ.
ನಿನ್ನೆ ಸಂಜೆಗೆ ಮಂಗಳೂರಿಗೆ ಆಗಮಿಸಿದ್ದ 250ಕ್ಕೂ ಹೆಚ್ಚು ಅಧಿಕಾರಿಗಳಿದ್ದ ತಂಡ ನಿಗೂಢ ಜಾಗದಲ್ಲಿ ಬೀಡು ಬಿಟ್ಟಿದ್ದರು. ಗೋವಾ, ಕೇರಳ, ತಮಿಳ್ನಾಡು ಸೇರಿದಂತೆ ರಾಜ್ಯದ ಬೆಂಗಳೂರು, ಬೆಳಗಾವಿ ಹೀಗೆ ವಿವಿಧೆಡೆಯ ಐಟಿ ಅಧಿಕಾರಿಗಳು ತಂಡದಲ್ಲಿದ್ದರು. ಮಂಗಳೂರು ಒಂದರಲ್ಲೇ 60ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಬುಕ್ ಮಾಡಲಾಗಿತ್ತು. ವಿಶೇಷ ಅಂದ್ರೆ, ಕಾರು ಚಾಲಕರಿಗೂ ದಾಳಿ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಬೇರೆ ಬೇರೆ ತಂಡಗಳಲ್ಲಾಗಿ ನಸುಕಿನ 5 ಗಂಟೆ ವೇಳೆಗೆ ಕಾರುಗಳಲ್ಲಿ ಹೊರಟಿದ್ದ ಅಧಿಕಾರಿಗಳು ತಮ್ಮ ಕಾರುಗಳ ಮುಂದೆ ಇಂಟರ್ ಸ್ಟೇಟ್ ಫುಟ್ಬಾಲ್ ಟೂರ್ನಮೆಂಟ್ ಎಂದು ಸ್ಟಿಕ್ಕರ್ ಹಾಕ್ಕೊಂಡಿದ್ದರು. ಚಾಲಕರು ಕೇಳಿದ್ದಕ್ಕೆ ಕೇರಳದಲ್ಲಿ ಫುಟ್ಬಾಲ್ ಟೂರ್ನಮೆಂಟ್ ಇದೆ, ಅಲ್ಲಿಗೆ ಹೋಗಲಿಕ್ಕಿದೆ ಎಂದು ಹೇಳಿದ್ದರಂತೆ.

ಅಧಿಕಾರಿಗಳು ಹೇಳಿದ ಜಾಗಕ್ಕೆ ಕಾರುಗಳು ತೆರಳಿದ್ದು, ಅದರಲ್ಲಿ ಕೆಲವು ಖಾಸಗಿ ವಾಹನಗಳು ಕೂಡ ಇದ್ದವು. ರಾಜ್ಯದಲ್ಲಿ ನಾಲ್ಕೈದು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಕಡೆ ದಾಳಿ ನಡೆದಿದ್ದು, ಮಂಗಳೂರಿನಿಂದ ಯಾವೆಲ್ಲಾ ಕಡೆಗಳಿಗೆ ಅಧಿಕಾರಿಗಳು ಹೊರಟಿದ್ದಾರೆ ಎನ್ನುವುದು ಗೊತ್ತಾಗಿಲ್ಲ.
ತುಮಕೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಸೇರಿದ ಮೆಡಿಕಲ್ ಕಾಲೇಜುಗಳು ಕೂಡ ದಾಳಿಗೆ ಒಳಗಾಗಿದ್ದು, ಮಂಗಳೂರು ಒಂದರಲ್ಲೇ ನಾಲ್ಕು ಮೆಡಿಕಲ್ ಕಾಲೇಜುಗಳಿಗೆ ದಾಳಿ ನಡೆದಿರುವುದು ಖಚಿತವಾಗಿದೆ. ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗೆ ದಾಳಿ ನಡೆದಿದ್ದು, ಅಗತ್ಯ ಕಂಡುಬಂದರೆ ಆಸ್ಪತ್ರೆ, ಕಾಲೇಜುಗಳಿಗೂ ದಾಳಿ ನಡೆಸುವ ಸಾಧ್ಯತೆ ಇದೆ. ಪ್ರಾಥಮಿಕವಾಗಿ ಕಾಲೇಜು ಮುಖ್ಯಸ್ಥರನ್ನು ಕೋಣೆಯಲ್ಲಿ ಕೂಡಿ ಹಾಕಿ, ಪ್ರಶ್ನೆಗಳನ್ನು ಮುಂದಿಡುತ್ತಾರೆ. ಜೊತೆಗೆ, ಇವೆಲ್ಲ ಕುಟುಂಬಸ್ಥರಿಂದಲೇ ನಡೆಸುವ ಕಾಲೇಜುಗಳಾಗಿರುವುದರಿಂದ ಇದರಲ್ಲಿ ಪ್ರಮುಖ ಉಸ್ತುವಾರಿಗಳನ್ನು ಕುಟುಂಬದ ಪ್ರಮುಖರೇ ನಡೆಸುತ್ತಾರೆ. ಅವರನ್ನು ವಶಕ್ಕೆ ಪಡೆದು, ಮೊಬೈಲ್ ತೆಗೆದಿರಿಸಿ ವಿಚಾರಣೆ ನಡೆಸುತ್ತಾರೆ.

ಮಂಗಳೂರಿನಲ್ಲಿ ಎಜೆ ಶೆಟ್ಟಿ, ಯೇನಪೋಯ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಾಗಿದ್ದು, ಇದರ ಮಾಲೀಕರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿರಲಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರ ಜೊತೆಗೆ ಆಪ್ತ ಸಂಬಂಧ ಇರಿಸಿಕೊಂಡಿದ್ದಾರೆ.
Income tax raid on Medical Colleges in Mangalore. Officers book 60 taxi cars stating that they have a football tournament to prevent the leak of information.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm