ಬ್ರೇಕಿಂಗ್ ನ್ಯೂಸ್
17-02-21 01:23 pm Mangaluru Correspondent ಕರಾವಳಿ
ಮಂಗಳೂರು, ಫೆ.17: ಮಂಗಳೂರಿನಲ್ಲಿ ನಾಲ್ಕು ಮೆಡಿಕಲ್ ಕಾಲೇಜು ಮುಖ್ಯಸ್ಥರನ್ನು ಗುರಿಯಾಗಿರಿಸಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ಇಡೀ ಕಾರ್ಯಾಚರಣೆಯನ್ನು ತುಂಬ ರಹಸ್ಯವಾಗಿ ಇರಿಸಿದ್ದಾರೆ.
ನಿನ್ನೆ ಸಂಜೆಗೆ ಮಂಗಳೂರಿಗೆ ಆಗಮಿಸಿದ್ದ 250ಕ್ಕೂ ಹೆಚ್ಚು ಅಧಿಕಾರಿಗಳಿದ್ದ ತಂಡ ನಿಗೂಢ ಜಾಗದಲ್ಲಿ ಬೀಡು ಬಿಟ್ಟಿದ್ದರು. ಗೋವಾ, ಕೇರಳ, ತಮಿಳ್ನಾಡು ಸೇರಿದಂತೆ ರಾಜ್ಯದ ಬೆಂಗಳೂರು, ಬೆಳಗಾವಿ ಹೀಗೆ ವಿವಿಧೆಡೆಯ ಐಟಿ ಅಧಿಕಾರಿಗಳು ತಂಡದಲ್ಲಿದ್ದರು. ಮಂಗಳೂರು ಒಂದರಲ್ಲೇ 60ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಬುಕ್ ಮಾಡಲಾಗಿತ್ತು. ವಿಶೇಷ ಅಂದ್ರೆ, ಕಾರು ಚಾಲಕರಿಗೂ ದಾಳಿ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಬೇರೆ ಬೇರೆ ತಂಡಗಳಲ್ಲಾಗಿ ನಸುಕಿನ 5 ಗಂಟೆ ವೇಳೆಗೆ ಕಾರುಗಳಲ್ಲಿ ಹೊರಟಿದ್ದ ಅಧಿಕಾರಿಗಳು ತಮ್ಮ ಕಾರುಗಳ ಮುಂದೆ ಇಂಟರ್ ಸ್ಟೇಟ್ ಫುಟ್ಬಾಲ್ ಟೂರ್ನಮೆಂಟ್ ಎಂದು ಸ್ಟಿಕ್ಕರ್ ಹಾಕ್ಕೊಂಡಿದ್ದರು. ಚಾಲಕರು ಕೇಳಿದ್ದಕ್ಕೆ ಕೇರಳದಲ್ಲಿ ಫುಟ್ಬಾಲ್ ಟೂರ್ನಮೆಂಟ್ ಇದೆ, ಅಲ್ಲಿಗೆ ಹೋಗಲಿಕ್ಕಿದೆ ಎಂದು ಹೇಳಿದ್ದರಂತೆ.

ಅಧಿಕಾರಿಗಳು ಹೇಳಿದ ಜಾಗಕ್ಕೆ ಕಾರುಗಳು ತೆರಳಿದ್ದು, ಅದರಲ್ಲಿ ಕೆಲವು ಖಾಸಗಿ ವಾಹನಗಳು ಕೂಡ ಇದ್ದವು. ರಾಜ್ಯದಲ್ಲಿ ನಾಲ್ಕೈದು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಕಡೆ ದಾಳಿ ನಡೆದಿದ್ದು, ಮಂಗಳೂರಿನಿಂದ ಯಾವೆಲ್ಲಾ ಕಡೆಗಳಿಗೆ ಅಧಿಕಾರಿಗಳು ಹೊರಟಿದ್ದಾರೆ ಎನ್ನುವುದು ಗೊತ್ತಾಗಿಲ್ಲ.
ತುಮಕೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಸೇರಿದ ಮೆಡಿಕಲ್ ಕಾಲೇಜುಗಳು ಕೂಡ ದಾಳಿಗೆ ಒಳಗಾಗಿದ್ದು, ಮಂಗಳೂರು ಒಂದರಲ್ಲೇ ನಾಲ್ಕು ಮೆಡಿಕಲ್ ಕಾಲೇಜುಗಳಿಗೆ ದಾಳಿ ನಡೆದಿರುವುದು ಖಚಿತವಾಗಿದೆ. ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗೆ ದಾಳಿ ನಡೆದಿದ್ದು, ಅಗತ್ಯ ಕಂಡುಬಂದರೆ ಆಸ್ಪತ್ರೆ, ಕಾಲೇಜುಗಳಿಗೂ ದಾಳಿ ನಡೆಸುವ ಸಾಧ್ಯತೆ ಇದೆ. ಪ್ರಾಥಮಿಕವಾಗಿ ಕಾಲೇಜು ಮುಖ್ಯಸ್ಥರನ್ನು ಕೋಣೆಯಲ್ಲಿ ಕೂಡಿ ಹಾಕಿ, ಪ್ರಶ್ನೆಗಳನ್ನು ಮುಂದಿಡುತ್ತಾರೆ. ಜೊತೆಗೆ, ಇವೆಲ್ಲ ಕುಟುಂಬಸ್ಥರಿಂದಲೇ ನಡೆಸುವ ಕಾಲೇಜುಗಳಾಗಿರುವುದರಿಂದ ಇದರಲ್ಲಿ ಪ್ರಮುಖ ಉಸ್ತುವಾರಿಗಳನ್ನು ಕುಟುಂಬದ ಪ್ರಮುಖರೇ ನಡೆಸುತ್ತಾರೆ. ಅವರನ್ನು ವಶಕ್ಕೆ ಪಡೆದು, ಮೊಬೈಲ್ ತೆಗೆದಿರಿಸಿ ವಿಚಾರಣೆ ನಡೆಸುತ್ತಾರೆ.

ಮಂಗಳೂರಿನಲ್ಲಿ ಎಜೆ ಶೆಟ್ಟಿ, ಯೇನಪೋಯ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಾಗಿದ್ದು, ಇದರ ಮಾಲೀಕರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿರಲಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರ ಜೊತೆಗೆ ಆಪ್ತ ಸಂಬಂಧ ಇರಿಸಿಕೊಂಡಿದ್ದಾರೆ.
Income tax raid on Medical Colleges in Mangalore. Officers book 60 taxi cars stating that they have a football tournament to prevent the leak of information.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm