ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm