ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm