ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm