ಬ್ರೇಕಿಂಗ್ ನ್ಯೂಸ್
19-02-21 10:58 am Mangalore Correspondent ಕರಾವಳಿ
ಪುತ್ತೂರು, ಫೆ.19: ರಂಗಸ್ಥಳದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದರು.

ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ. ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದ ಶ್ರೀಧರ ಭಂಡಾರಿಗೆ ತೆಂಕುತಿಟ್ಟಿನಲ್ಲಿ ಸಾಟಿಯಾಗಬಲ್ಲ ಇನ್ನೊಬ್ಬ ವೇಷಧಾರಿಯೇ ಇರಲಿಲ್ಲ. ನಾಟ್ಯ, ಲಯಬದ್ಧ ಮಾತುಗಾರಿಕೆ, ಇಳಿವಯಸ್ಸಿನಲ್ಲೂ ರಂಗಸ್ಥಳವನ್ನು ಗಿರಗಿಟ್ಟೆ ಮಾಡುವಂತೆ ಕುಣಿಯುತ್ತಿದ್ದ ಛಾತಿ ಭಂಡಾರಿಗೆ ಭಂಡಾರಿಯೇ ಸಾಟಿ. ವಿಶೇಷವಾಗಿ ಅಭಿಮನ್ಯು ಪಾತ್ರಕ್ಕೆ ಯಕ್ಷಗಾನದಲ್ಲಿ ಮಿಂಚು ಹರಿಸಿದ್ದೇ ಭಂಡಾರಿ. ಚಕ್ರವ್ಯೂಹ ಪ್ರಸಂಗದಲ್ಲಿ ಅಭಿಮನ್ಯು ಚಕ್ರವ್ಯೂಹ ಭೇದಿಸುವ ಪರಿಯನ್ನು ಪ್ರೇಕ್ಷಕರಿಗೆ ಮಹಾಭಾರತ ನೋಡಿದ ರೀತಿಯಲ್ಲೇ ಕಟ್ಟಿಕೊಟ್ಟಿದ್ದು ಶ್ರೀಧರ ಭಂಡಾರಿ. ಮೊಣಕಾಲು ಊರಿಕೊಂಡು ಗಿರಗಿಟ್ಟೆ ತಿರುಗುತ್ತಿದ್ದ ಪರಿ ನೋಡುಗರಲ್ಲಿ ಮಿಂಚಿನ ಸಂಚಾರ ಮೂಡಿಸುತ್ತಿತ್ತು. 60ರ ಇಳಿವಯಸ್ಸಲ್ಲೂ ಮೊಣಕಾಲಿನಲ್ಲಿ ತಿರುಗುತ್ತಿದ್ದ ಏಕೈಕ ಪಾತ್ರಧಾರಿಯೂ ಅವರೇ ಆಗಿದ್ದರು.


ಆರಂಭದಲ್ಲಿ ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಗುರುತಿಸಿದ್ದರು.



ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm