ಬ್ರೇಕಿಂಗ್ ನ್ಯೂಸ್
19-02-21 10:58 am Mangalore Correspondent ಕರಾವಳಿ
ಪುತ್ತೂರು, ಫೆ.19: ರಂಗಸ್ಥಳದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದರು.

ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ. ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದ ಶ್ರೀಧರ ಭಂಡಾರಿಗೆ ತೆಂಕುತಿಟ್ಟಿನಲ್ಲಿ ಸಾಟಿಯಾಗಬಲ್ಲ ಇನ್ನೊಬ್ಬ ವೇಷಧಾರಿಯೇ ಇರಲಿಲ್ಲ. ನಾಟ್ಯ, ಲಯಬದ್ಧ ಮಾತುಗಾರಿಕೆ, ಇಳಿವಯಸ್ಸಿನಲ್ಲೂ ರಂಗಸ್ಥಳವನ್ನು ಗಿರಗಿಟ್ಟೆ ಮಾಡುವಂತೆ ಕುಣಿಯುತ್ತಿದ್ದ ಛಾತಿ ಭಂಡಾರಿಗೆ ಭಂಡಾರಿಯೇ ಸಾಟಿ. ವಿಶೇಷವಾಗಿ ಅಭಿಮನ್ಯು ಪಾತ್ರಕ್ಕೆ ಯಕ್ಷಗಾನದಲ್ಲಿ ಮಿಂಚು ಹರಿಸಿದ್ದೇ ಭಂಡಾರಿ. ಚಕ್ರವ್ಯೂಹ ಪ್ರಸಂಗದಲ್ಲಿ ಅಭಿಮನ್ಯು ಚಕ್ರವ್ಯೂಹ ಭೇದಿಸುವ ಪರಿಯನ್ನು ಪ್ರೇಕ್ಷಕರಿಗೆ ಮಹಾಭಾರತ ನೋಡಿದ ರೀತಿಯಲ್ಲೇ ಕಟ್ಟಿಕೊಟ್ಟಿದ್ದು ಶ್ರೀಧರ ಭಂಡಾರಿ. ಮೊಣಕಾಲು ಊರಿಕೊಂಡು ಗಿರಗಿಟ್ಟೆ ತಿರುಗುತ್ತಿದ್ದ ಪರಿ ನೋಡುಗರಲ್ಲಿ ಮಿಂಚಿನ ಸಂಚಾರ ಮೂಡಿಸುತ್ತಿತ್ತು. 60ರ ಇಳಿವಯಸ್ಸಲ್ಲೂ ಮೊಣಕಾಲಿನಲ್ಲಿ ತಿರುಗುತ್ತಿದ್ದ ಏಕೈಕ ಪಾತ್ರಧಾರಿಯೂ ಅವರೇ ಆಗಿದ್ದರು.


ಆರಂಭದಲ್ಲಿ ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಗುರುತಿಸಿದ್ದರು.



ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm