ಬ್ರೇಕಿಂಗ್ ನ್ಯೂಸ್
19-02-21 04:08 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಪುತ್ರಿಯನ್ನು ಕ್ರಿಸ್ತಿಯನ್ ಯುವಕನೊಬ್ಬ ಮದುವೆಯಾಗಿರುವುದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಭಾನುವಾರ ಶಿರ್ವದ ಶೋಕಮಾತಾ ಇಗರ್ಜಿಯಲ್ಲಿ ಸದ್ದಿಲ್ಲದೆ ಇವರ ಮದುವೆ ನಡೆದಿದೆ ಎನ್ನಲಾಗುತ್ತಿದೆ.

ಭಾನುವಾರ ಸಂಜೆ ಇಗರ್ಜಿಯಲ್ಲಿ ಮದುವೆ, ಸೋಮವಾರ ಮಂಗಳೂರಿಗೆ ಬಂದು ಯುವಕ- ಯುವತಿ ತಮ್ಮ ಮದುವೆಯನ್ನು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಸೋಮವಾರ ಕಾಪು ಸಮೀಪದ ರೆಸಾರ್ಟಿನಲ್ಲಿ ಅದ್ದೂರಿ ರಿಸೆಪ್ಶನ್ ಕೂಡ ನಡೆದಿದೆ. ಮದುವೆ ಮತ್ತು ರಿಸೆಪ್ಶನ್ ಕಾರ್ಯಕ್ರಮದಲ್ಲಿ ಅಜಿತ್ ಕುಮಾರ್ ರೈ ಮತ್ತು ಅವರ ಪತ್ನಿ ಆಶಾಜ್ಯೋತಿ ರೈ ಪಾಲ್ಗೊಂಡಿದ್ದಾರೆ. ಮದುವೆಯ ರಿಸೆಪ್ಶನ್ ಫೋಟೋಗಳು ಜಾಲತಾಣದಲ್ಲಿ ಹರಿದಾಡಿದ್ದು, ಬಂಟರು ಸೇರಿದಂತೆ ಹಿಂದು ಸಂಘಟನೆ ಕಾರ್ಯಕರ್ತರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.

ಇಷ್ಟಕ್ಕೂ ಬಂಟರ ಹುಡುಗಿಯನ್ನು ವರಿಸಿದ ಮದುಮಗ ಯಾರು ಅಂತೀರಾ..? 2000ನೇ ಇಸವಿಯ ಆಸುಪಾಸಿನಲ್ಲಿ ಬೆಂಗಳೂರಿನಲ್ಲಿ ಆರ್ಚ್ ಬಿಷಪ್ ಆಗಿದ್ದವರು ಇಗ್ನೇಷಿಯಸ್ ಮಥಾಯಸ್. ಶಿರ್ವ ಮೂಲದ ಇಗ್ನೇಷಿಯಸ್ ಮಥಾಯಸ್ ಇಡೀ ಕರ್ನಾಟಕಕ್ಕೆ ಚರ್ಚ್ ಗಳ ಪಾಲಿಗೆ ಮುಖ್ಯಸ್ಥರಾಗಿದ್ದ ವ್ಯಕ್ತಿ. ಮಹಾ ಧರ್ಮಾಧ್ಯಕ್ಷರಾಗಿದ್ದವರು. ಆನಂತರ ರಿಟೈರ್ ಆಗಿದ್ದರು. ಇಗ್ನೇಷಿಯಸ್ ಮಥಾಯಸ್, ಮೊಮ್ಮಗನೇ ಈಗ ಮದುವೆ ಗಂಡು. ಅಂದ್ರೆ, ಇಗ್ನೇಶಿಯಸ್ ಮಥಾಯಸ್ ಅವರ ತಮ್ಮನ ಮಗ ಮಂಗಳೂರಿನಲ್ಲಿ ಉದ್ಯಮಿಯಾಗಿರುವ ಗ್ರೆಗರಿ ಮಥಾಯಸ್ ಅವರ ಪುತ್ರ.

ಬಿಷಪರ ಕೃಪೆಯಲ್ಲಿ ಗ್ರೆಗರಿ ಮಥಾಯಸ್, ಮಂಗಳೂರಿನಲ್ಲಿ ಮಥಾಯಸ್ ಪ್ರಾಪರ್ಟಿ, ಮಥಾಯಸ್ ಅಲ್ಯುಮಿನಿಯಂ, ಮಥಾಯಸ್ ಸ್ಟೀಲ್, ಮಥಾಯಸ್ ಬಿಲ್ಡರ್ ಹೀಗೆ ಹತ್ತು ಹಲವು ಉದ್ಯಮಗಳನ್ನು ಬೆಳೆಸಿಕೊಂಡು ಬಂದಿದ್ದಾರೆ. ಗ್ರೆಗರಿ ಮಥಾಯಸ್ ಅವರ ಪುತ್ರನ ಪ್ರೀತಿಗೆ ಬಿದ್ದ ಅಜಿತ್ ಕುಮಾರ್ ರೈಯವರ ಕಿರಿಯ ಪುತ್ರಿ ಈಗ ಕ್ರಿಸ್ತಿಯನ್ ಶೈಲಿಯಲ್ಲೇ ಮದುವೆಯಾಗಿ ಮಥಾಯಸ್ ಸೊಸೆಯಾಗಿದ್ದಾಳೆ.

ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು, ಬಂಟರ ಯಾನೆ ನಾಡವರ ಸಂಘದಲ್ಲಿ ಪ್ರಮುಖ ಜವಾಬ್ದಾರಿ, ದೇವಸ್ಥಾನ ಸೇರಿದಂತೆ ಹಿಂದು ಸಂಘಟನೆಗಳಲ್ಲಿ ಜವಾಬ್ದಾರಿ ವಹಿಸಿಕೊಂಡು ಜನಪ್ರಿಯರಾಗಿರುವ ಅಜಿತ್ ಕುಮಾರ್ ರೈ ಮತ್ತವರ ಪತ್ನಿ ಆಶೋಜ್ಯೋತಿ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈಯವರ ಪುತ್ರಿ ಈಗ ಕ್ರಿಸ್ತಿಯನ್ ಕುವರನನ್ನು ವರಿಸಿದ್ದು ಬಂಟರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, ಹತಾಶೆಯ ಮಾತುಗಳು ಕೇಳಿಬರುತ್ತಿದೆ. ಬಂಟರ ಸಂಘಕ್ಕೆ ರಾಜಿನಾಮೆ ನೀಡಬೇಕೆಂಬ ಒತ್ತಾಯದ ಮಾತುಗಳೂ ಕೇಳಿಬರುತ್ತಿವೆ.

ಬಂಟರ ಸಂಘದ ಅಧ್ಯಕ್ಷರಾಗಿ ಬಂಟರ ಪರಂಪರೆ, ಸಂಸ್ಕೃತಿಯ ಬಗ್ಗೆ ಹೇಳಬೇಕಾದವರು ಕ್ರಿಸ್ತಿಯನ್ನರ ಜೊತೆ ಸೇರಿ ಕ್ಯಾಂಡಲ್ ಉರಿಸಿದ್ದಾರೆ ಎಂದು ಹಲವು ಮಂದಿ ಟೀಕೆ ಮಾಡಿದ್ದಾರೆ. ಮದುಮಗಳು ಕೈಯಲ್ಲಿ ಕ್ರಿಸ್ತಿಯನ್ ಶೈಲಿಯಲ್ಲಿ ಗ್ಲಾಸಲ್ಲಿ ವೈನ್ ಹಿಡಿದಿರುವ ಫೋಟೋಗಳ ಬಗ್ಗೆಯೂ ಟೀಕೆ ಕೇಳಿಬಂದಿದೆ. ಬಂಟರ ಸಂಘದ ಅಧ್ಯಕ್ಷರಾಗಿ ಹೀಗೆಲ್ಲಾ ಮಾಡಲು ಬಿಡಬಾರದಿತ್ತು ಅನ್ನೋ ಮಾತನ್ನು ಹೇಳಿ ಜಾಲತಾಣದಲ್ಲಿ ಅಜಿತ್ ಕುಮಾರ್ ರೈ ಅವರನ್ನು ಟೀಕಿಸುತ್ತಿದ್ದಾರೆ. ದೊಡ್ಡವರ ಮದುವೆ ಹೇಗೂ ನಡೆಯುತ್ತದೆ, ಬಡವರದ್ದಾದರೆ ಹಿಂದು ಸಂಘಟನೆಗಳು ಅಡ್ಡ ಬರ್ತಿತ್ತು ಎನ್ನೋ ಟೀಕೆಯನ್ನೂ ಕೆಲವರು ಮಾಡುತ್ತಿದ್ದಾರೆ.


ಕಳೆದ ಎರಡು ಅವಧಿಯಲ್ಲಿ ಬಂಟರ ಮಾತೃ ಸಂಘದ ಅಧ್ಯಕ್ಷರಾಗಿರುವ ಅಜಿತಣ್ಣನ ಬಗ್ಗೆ ಟೀಕೆ, ಟಿಪ್ಪಣಿಗಳಂತೂ ಜಾಲತಾಣದಲ್ಲಿ ಭಾರೀ ಸದ್ದು ಮಾಡಿವೆ. ತಮ್ಮ ಮಗಳನ್ನು ಕ್ರಿಸ್ತಿಯನ್ ಯುವಕನಿಗೆ ಧಾರೆಯೆರೆದು ಕೊಟ್ಟಿದ್ದು, ಪಾಶ್ಚಾತ್ಯ ಶೈಲಿಯಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದು ಟೀಕೆಗೆ ಗುರಿಯಾಗಿದೆ. ಮದುವೆ ಮಾಡೋದಿದ್ದರೆ ಹಿಂದು ಸಂಪ್ರದಾಯದಲ್ಲೇ ಮದುವೆ ಮಾಡಬಹುದಿತ್ತಲ್ಲಾ ಅನ್ನುವ ಅಸಹನೆಯ ಭಾವಗಳನ್ನೂ ಹೇಳಿಕೊಳ್ಳುತ್ತಿದ್ದಾರೆ. ಮಂಗಳೂರು, ಉಡುಪಿ, ಕರಾವಳಿಯ ಮಟ್ಟಿಗೆ ಪ್ರಬಲ ಶಕ್ತಿಯಾಗಿರುವ ಬಂಟ ಸಮುದಾಯದ ಕುವರಿಯೊಬ್ಬಳು ಕ್ರಿಸ್ತಿಯನ್ ಹುಡುಗನ ವರಿಸಿದ್ದು ಬಂಟರ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.
Bunts Mather Sangha President of Mangalore Ajith Kumar Malady Daughters wedding lands into controversy on Social Media after she married a Bishops son.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm