ವಿದ್ಯುತ್ ಶಾಕ್ ; ಯುವಕ ಮೃತ್ಯು

19-02-21 05:00 pm       Mangalore Correspondent   ಕರಾವಳಿ

ವಿದ್ಯುತ್ ಅವಘಡದಿಂದಾಗಿ ಯುವಕ ಮೃತಪಟ್ಟ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ, ಫೆ.19 : ಮನೆಯಲ್ಲಿ ವಿದ್ಯುತ್ ಅವಘಡದಿಂದಾಗಿ ಯುವಕ ಮೃತಪಟ್ಟ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಅವಿನಾಶ್ ಗೌಡ (23) ಎಂದು ಗುರುತಿಸಲಾಗಿದೆ. ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಇಲೆಕ್ಟ್ರಿಷಿಯನ್ ಸಹಾಯಕನಾಗಿ ಕೂಡ ಕೆಲಸ ಮಾಡುತ್ತಿದ್ದರು. ವಿದ್ಯುತ್ ಉಪಕರಣ ದುರಸ್ತಿ ವೇಳೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು ಅದಾಗಲೇ ಅವರು ಮೃತಪಟ್ಟಿದ್ದರು.‌ ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23-year-old youth died after current shock at Belthangady. The deceased has been identified as Avinash Gowda.