ಬ್ರೇಕಿಂಗ್ ನ್ಯೂಸ್
20-02-21 05:42 pm Mangalore Correspondent ಕರಾವಳಿ
ಉಳ್ಳಾಲ: ಫೆ.20 : HLH (Hemophagocyti Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಏಳು ವರ್ಷದ ಮಗು ತನಿಶ್ ಗಟ್ಟಿಯ ಹೆಚ್ಚಿನ ಚಿಕಿತ್ಸೆಗಾಗಿ 45 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು ವಿಶ್ವ ಹಿಂದು ಪರಿಷತ್, ಬಜರಂಗದದ ವತಿಯಿಂದ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ದಿನದಂದು ಸನ್ನಿಧಾನದಲ್ಲಿ ಸಾರ್ವಜನಿಕರಲ್ಲಿ ಭಿಕ್ಷೆ ಎತ್ತಿ 30,000 ನಗದನ್ನು ಕ್ರೋಡೀಕರಿಸಿದೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಸೆಕ್ಯುರಿಟಿ ಕೆಲಸದಲ್ಲಿರುವ ಬಜಾಲ್ ಕಾವು ಬೈಲ್ ನಿವಾಸಿ ನವೀನ್ ಗಟ್ಟಿಯವರ ಏಕೈಕ ಮಗ ತನಿಷ್ ಗಟ್ಟಿ(7) Hemophagocyti Lymphohistocytosis(ಬೆನ್ನು ಮೂಳೆ ಕ್ಯಾನ್ಸರ್) ಎಂಬ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾನೆ. ಪ್ರಸ್ತುತ ತನಿಷ್ ಮಂಗಳೂರಿನ K.M.C ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವುದಾಗಿ ಹೇಳಿದ್ದಾರೆ. ಅವರ ನಿರ್ದೇಶನದಂತೆ ಮಗುವನ್ನು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಜುಂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ ಕೊಂಡೊಯ್ದು ಪರಿಶೀಲಿಸಿದ್ದು ಅಲ್ಲಿಯ ಉನ್ನತ ವೈದ್ಯರು ಮೂಳೆ ಅಸ್ಥಿ ಮಜ್ಜೆ ಕಸಿ ( Bone Marrow Transplant) ಮಾಡಲು ಸೂಚಿಸಿದ್ದಾರೆ. ಈ ಚಿಕಿತ್ಸೆಗೆ ಅಂದಾಜು ಸುಮಾರು 45 ಲಕ್ಷ ರೂಪಾಯಿ ಖರ್ಚು ತಗಲಲಿದ್ದು ಅಷ್ಟೊಂದು ದೊಡ್ಡ ಮೊತ್ತವನ್ನು ಕ್ರೋಢೀಕರಿಸಲು ಸೆಕ್ಯುರಿಟಿ ಗಾರ್ಡ್ ನವೀನ್ ಗಟ್ಟಿ ಅವರ ಕುಟುಂಬ ಪರದಾಡುವಂತಾಗಿದೆ.

ಇದುವರೆಗಿನ ಚಿಕಿತ್ಸೆಗೆ ಅನೇಕ ಹೃದಯ ವೈಶಾಲ್ಯ ದಾನಿಗಳು ತಮ್ಮಿಂದಾದ ಸಹಾಯ ಹಸ್ತವನ್ನು ನೀಡಿದರ ಫಲವಾಗಿ ತನಿಷ್ ಇಂದು ಬದುಕುಳಿದಿದ್ದಾನೆ. ತನಿಷ್ ನ ಚಿಕಿತ್ಸೆಗೆ ಸಹಾಯ ನೀಡುವಂತೆ ಪೋಷಕರು ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ಮೊರೆ ಹೋಗಿದ್ದು ಮರುಗಿದ ಶಾಸಕರು ತನ್ನ ವೈಯಕ್ತಿಕ ಮತ್ತು ಸ್ನೇಹಿತ ವರ್ಗದವರಿಂದ ಸಹಾಯ ಧನವನ್ನು ದೊರಕಿಸುವ ಭರವಸೆ ನೀಡಿದ್ದಾರೆ.


ತನಿಷ್ ಗಟ್ಟಿ ಚಿಕಿತ್ಸೆಗೆ ಬೃಹತ್ ಮೊತ್ತ ಕ್ರೋಡೀಕರಿಸಲು ಬಜರಂಗದಳ ಬೋಳಾರ ಶಾಖೆಯವರು ಪಣ ತೊಟ್ಟಿದ್ದು ಇದುವರೆಗೆ 8 ಲಕ್ಷ ಹಣವು ಕ್ರೋಢೀಕೃತವಾಗಿದೆ.

ವಿಶೇಷ ವೇಷದಲ್ಲಿ ವಿಕ್ಕಿ ಶೆಟ್ಟಿ ಬೆದ್ರರಿಂದಲೂ ಭಿಕ್ಷಾಟನೆ
ತನಿಷ್ ಅವರ ಚಿಕಿತ್ಸೆಗಾಗಿ ನಮ್ಮ ತುಳುನಾಡು ಟ್ರಸ್ಟ್(ರಿ) ಆಶಿಸಾ ನಿಧಿ ಯೋಜನೆಯಡಿ ಸಾಮಾಜಿಕ ಕಾರ್ಯಕರ್ತ ವಿಕ್ಕಿ ಶೆಟ್ಟಿ ಬೆದ್ರ ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ಧೃಢಕಲಶಾಭಿಷೇಕದಲ್ಲಿ ನಿನ್ನೆಯಿಂದ(ಫೆ.19) ನಾಳೆ ರಾತ್ರಿಯವರೆಗೂ ಭಕ್ತಾದಿಗಳಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಾರೆ. ವಿಕ್ಕಿ ಶೆಟ್ಟಿ ಬೆದ್ರ ಅವರು ನಾಲ್ಕನೇ ಬಾರಿ ಬಡ ಜನರ ಸೇವೆಗಾಗಿ ವಿಶೇಷ ವೇಷ ಧರಿಸಿ ಸತ್ಕಾರ್ಯ ಮಾಡುತ್ತಿದ್ದಾರೆ.

ತನಿಷ್ ಗಟ್ಟಿ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಹುದಾಗಿದೆ.
Name :- Naveen
Address:- D.No 8-125/1
Kudthadka kankanady bajal mangalore
Branch:- Bajal (Mangalore)
State bank of India
Account number:-38955686728
IFSC CODE:- SBINOOO9052
Mob :(Google pay) 7899500542
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm