ಬ್ರೇಕಿಂಗ್ ನ್ಯೂಸ್
20-02-21 05:42 pm Mangalore Correspondent ಕರಾವಳಿ
ಉಳ್ಳಾಲ: ಫೆ.20 : HLH (Hemophagocyti Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಏಳು ವರ್ಷದ ಮಗು ತನಿಶ್ ಗಟ್ಟಿಯ ಹೆಚ್ಚಿನ ಚಿಕಿತ್ಸೆಗಾಗಿ 45 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು ವಿಶ್ವ ಹಿಂದು ಪರಿಷತ್, ಬಜರಂಗದದ ವತಿಯಿಂದ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ದಿನದಂದು ಸನ್ನಿಧಾನದಲ್ಲಿ ಸಾರ್ವಜನಿಕರಲ್ಲಿ ಭಿಕ್ಷೆ ಎತ್ತಿ 30,000 ನಗದನ್ನು ಕ್ರೋಡೀಕರಿಸಿದೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಸೆಕ್ಯುರಿಟಿ ಕೆಲಸದಲ್ಲಿರುವ ಬಜಾಲ್ ಕಾವು ಬೈಲ್ ನಿವಾಸಿ ನವೀನ್ ಗಟ್ಟಿಯವರ ಏಕೈಕ ಮಗ ತನಿಷ್ ಗಟ್ಟಿ(7) Hemophagocyti Lymphohistocytosis(ಬೆನ್ನು ಮೂಳೆ ಕ್ಯಾನ್ಸರ್) ಎಂಬ ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದಾನೆ. ಪ್ರಸ್ತುತ ತನಿಷ್ ಮಂಗಳೂರಿನ K.M.C ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವುದಾಗಿ ಹೇಳಿದ್ದಾರೆ. ಅವರ ನಿರ್ದೇಶನದಂತೆ ಮಗುವನ್ನು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಜುಂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ ಕೊಂಡೊಯ್ದು ಪರಿಶೀಲಿಸಿದ್ದು ಅಲ್ಲಿಯ ಉನ್ನತ ವೈದ್ಯರು ಮೂಳೆ ಅಸ್ಥಿ ಮಜ್ಜೆ ಕಸಿ ( Bone Marrow Transplant) ಮಾಡಲು ಸೂಚಿಸಿದ್ದಾರೆ. ಈ ಚಿಕಿತ್ಸೆಗೆ ಅಂದಾಜು ಸುಮಾರು 45 ಲಕ್ಷ ರೂಪಾಯಿ ಖರ್ಚು ತಗಲಲಿದ್ದು ಅಷ್ಟೊಂದು ದೊಡ್ಡ ಮೊತ್ತವನ್ನು ಕ್ರೋಢೀಕರಿಸಲು ಸೆಕ್ಯುರಿಟಿ ಗಾರ್ಡ್ ನವೀನ್ ಗಟ್ಟಿ ಅವರ ಕುಟುಂಬ ಪರದಾಡುವಂತಾಗಿದೆ.

ಇದುವರೆಗಿನ ಚಿಕಿತ್ಸೆಗೆ ಅನೇಕ ಹೃದಯ ವೈಶಾಲ್ಯ ದಾನಿಗಳು ತಮ್ಮಿಂದಾದ ಸಹಾಯ ಹಸ್ತವನ್ನು ನೀಡಿದರ ಫಲವಾಗಿ ತನಿಷ್ ಇಂದು ಬದುಕುಳಿದಿದ್ದಾನೆ. ತನಿಷ್ ನ ಚಿಕಿತ್ಸೆಗೆ ಸಹಾಯ ನೀಡುವಂತೆ ಪೋಷಕರು ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ಮೊರೆ ಹೋಗಿದ್ದು ಮರುಗಿದ ಶಾಸಕರು ತನ್ನ ವೈಯಕ್ತಿಕ ಮತ್ತು ಸ್ನೇಹಿತ ವರ್ಗದವರಿಂದ ಸಹಾಯ ಧನವನ್ನು ದೊರಕಿಸುವ ಭರವಸೆ ನೀಡಿದ್ದಾರೆ.


ತನಿಷ್ ಗಟ್ಟಿ ಚಿಕಿತ್ಸೆಗೆ ಬೃಹತ್ ಮೊತ್ತ ಕ್ರೋಡೀಕರಿಸಲು ಬಜರಂಗದಳ ಬೋಳಾರ ಶಾಖೆಯವರು ಪಣ ತೊಟ್ಟಿದ್ದು ಇದುವರೆಗೆ 8 ಲಕ್ಷ ಹಣವು ಕ್ರೋಢೀಕೃತವಾಗಿದೆ.

ವಿಶೇಷ ವೇಷದಲ್ಲಿ ವಿಕ್ಕಿ ಶೆಟ್ಟಿ ಬೆದ್ರರಿಂದಲೂ ಭಿಕ್ಷಾಟನೆ
ತನಿಷ್ ಅವರ ಚಿಕಿತ್ಸೆಗಾಗಿ ನಮ್ಮ ತುಳುನಾಡು ಟ್ರಸ್ಟ್(ರಿ) ಆಶಿಸಾ ನಿಧಿ ಯೋಜನೆಯಡಿ ಸಾಮಾಜಿಕ ಕಾರ್ಯಕರ್ತ ವಿಕ್ಕಿ ಶೆಟ್ಟಿ ಬೆದ್ರ ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ಧೃಢಕಲಶಾಭಿಷೇಕದಲ್ಲಿ ನಿನ್ನೆಯಿಂದ(ಫೆ.19) ನಾಳೆ ರಾತ್ರಿಯವರೆಗೂ ಭಕ್ತಾದಿಗಳಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಾರೆ. ವಿಕ್ಕಿ ಶೆಟ್ಟಿ ಬೆದ್ರ ಅವರು ನಾಲ್ಕನೇ ಬಾರಿ ಬಡ ಜನರ ಸೇವೆಗಾಗಿ ವಿಶೇಷ ವೇಷ ಧರಿಸಿ ಸತ್ಕಾರ್ಯ ಮಾಡುತ್ತಿದ್ದಾರೆ.

ತನಿಷ್ ಗಟ್ಟಿ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಹುದಾಗಿದೆ.
Name :- Naveen
Address:- D.No 8-125/1
Kudthadka kankanady bajal mangalore
Branch:- Bajal (Mangalore)
State bank of India
Account number:-38955686728
IFSC CODE:- SBINOOO9052
Mob :(Google pay) 7899500542
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm