ಕೇರಳ ಗಡಿ ಪ್ರವೇಶಕ್ಕೆ ನಿರ್ಬಂಧ ; ಕೊರೊನಾ ನೆಗೆಟಿವ್ ವರದಿ ಇದ್ದಲ್ಲಿ ಮಾತ್ರ ಅವಕಾಶ

21-02-21 11:56 am       Mangalore Correspondent   ಕರಾವಳಿ

ದ.ಕ. ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್​ಪೋಸ್ಟ್​ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.

ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್​ಪೋಸ್ಟ್​ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.

ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್​​ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ‌ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ. 

ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ‌ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.