ಬ್ರೇಕಿಂಗ್ ನ್ಯೂಸ್
21-02-21 12:41 pm Mangalore Correspondent ಕರಾವಳಿ
ಉಳ್ಳಾಲ, ಫೆ.21: ವಾರದ ಹಿಂದೆ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಗೆದ್ದು ಬೀಗಿದ್ದ ಕೊಣಾಜೆ ಪೊಲೀಸರನ್ನ ಮಣಿಸುವುದರ ಮೂಲಕ ಉಳ್ಳಾಲ ಪೊಲೀಸರು ಮತ್ತೆ ರಿವೇಂಜ್ ತೆಗೆದಿದ್ದಾರೆ.
ಮಾಜಿ ಶಾಸಕ ಯು.ಟಿ ಫರೀದ್ ಸ್ವರಣಾರ್ಥವಾಗಿ ಉಳ್ಳಾಲದ ಸೀ ಗ್ರೌಂಡ್ ನಲ್ಲಿ ನಡೆಯುತ್ತಿರುವ ಹೊನಲು ಬೆಳಕಿನ ಟೆನಿಸ್ ಬಾಲ್ ಓವರ್ ಆರ್ಮ್ ಉಳ್ಳಾಲ ಪ್ರೀಮಿಯರ್ ಲೀಗ್ (UPL) ಟೂರ್ನಿಯಲ್ಲಿ ನಿನ್ನೆ ರಾತ್ರಿ ನಡೆದ ಔಪಚಾರಿಕ ಪಂದ್ಯದಲ್ಲಿ ಉಳ್ಳಾಲ ಮತ್ತು ಕೊಣಾಜೆ ಠಾಣೆ ಪೊಲೀಸರು ಪರಸ್ಪರ ಸೆಣಸಿದ್ದಾರೆ.

ಅತೀ ಸೂಕ್ಷ್ಮ ಪ್ರದೇಶವಾದ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರಕ್ಷಕರು ಸ್ವಾಭಾವಿಕವಾಗಿಯೇ ದಿನವಿಡೀ ಒತ್ತಡದಲ್ಲೇ ಇರುತ್ತಾರೆ. ಒತ್ತಡ ಭರಿತ ಕರ್ತವ್ಯದಿಂದ ಸ್ವಲ್ಪ ಸಮಯ ಹೊರ ಬಂದ ಪೊಲೀಸರು ನಿನ್ನೆ ರಾತ್ರಿ ಹೊನಲು ಬೆಳಕಿನ ಕ್ರಿಕೆಟಲ್ಲಿ ತೊಡಗಿಸಿ ತುಂಬಾನೆ ಖುಷಿ ಪಟ್ಟರು. ಕಳೆದ ಶನಿವಾರವೂ ದೇರಳಕಟ್ಟೆಯ ಗ್ರೀನ್ ಗ್ರೌಂಡಲ್ಲಿ ದೇರಳಕಟ್ಟೆ ಫ್ರೆಂಡ್ಸ್ ಸರ್ಕಲ್ ನ ವತಿಯಿಂದ ನಡೆದ ಸೌಹಾರ್ದ ಕಪ್ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿಯ ಔಪಚಾರಿಕ ಪಂದ್ಯದಲ್ಲಿ ಉಳ್ಳಾಲ ಮತ್ತು ಕೊಣಾಜೆ ಪೊಲೀಸರು ಪರಸ್ಪರ ಸೆಣಸಿದ್ದು ಕೊಣಾಜೆ ಠಾಣಾ ಪೊಲೀಸರ ತಂಡ ಗೆದ್ದು ಬೀಗಿತ್ತು.

ಕೊಣಾಜೆ ಪೊಲೀಸರ ವಿರುದ್ಧ ರಿವೇಂಜ್ ತೆಗೆಯಲು ಕಾಯುತ್ತಿದ್ದ ಉಳ್ಳಾಲ ಪೊಲೀಸರು ನಿನ್ನೆ ರಾತ್ರಿ ನಡೆದ 8 ಓವರ್ ಗಳ ಓವರ್ ಆರ್ಮ್ ಪಂದ್ಯದಲ್ಲಿ ಗೆದ್ದು ವಿಜಯದ ಕೇಕೆ ಹಾಕಿದ್ದಾರೆ. ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ನಡೆಸಿದ ಉಳ್ಳಾಲ ಪೊಲೀಸರ ತಂಡವು ಕಪ್ತಾನ ಪಿ.ಎಸ್.ಐ ಶಿವಕುಮಾರ್ ನಾಯಕತ್ವದಲ್ಲಿ ನಿಗದಿತ 8 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 57 ರನ್ ಗಳ ಮೊತ್ತ ಪೇರಿಸಿದೆ. ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೊಣಾಜೆ ಪೊಲೀಸ್ ತಂಡ ಕಪ್ತಾನ ಪಿ.ಎಸ್.ಐ ಮಲ್ಲಿಕಾರ್ಜುನ ಬಿರಾದಾರ್ ನಾಯಕತ್ವದಲ್ಲಿ 8 ಓವರ್ ಗಳಲ್ಲಿ 8 ವಿಕೆಟ್ ಗಳನ್ನು ಕಳಕೊಂಡು 54 ರನ್ ಗಳಿಸಲಷ್ಟೇ ಶಕ್ತವಾಗಿದ್ದು ಕೇವಲ 3 ರನ್ ಗಳ ಅಂತರಲ್ಲಿ ಸೋಲನ್ನು ಕಂಡಿತು.

ಜಿದ್ದಾಜಿದ್ದಿ ಪಂದ್ಯದಲ್ಲಿ ಕೊಣಾಜೆ ಪೊಲೀಸ್ ತಂಡದ ವಿಜಯ್ ಅವರು 26 ಎಸೆತಗಳಲ್ಲಿ 38 ರನ್ ಗಳಿಸಿದ್ದಲ್ಲದೆ ಎದುರಾಳಿಗಳ 2 ವಿಕೆಟ್ ಗಳನ್ನು ಕಿತ್ತು ಗಮನಸೆಳೆದರು. ಉಳ್ಳಾಲ ಪೊಲೀಸ್ ತಂಡದ ಪ್ರಶಾಂತ್ ಅವರು 19 ಎಸೆತಗಳಲ್ಲಿ 18 ರನ್ ಗಳಿಸಿ ಪಂದ್ಯ ಶ್ರೇಷ್ಠರಾದರೆ, ಸಿದ್ಧು ಮತ್ತು ಸಾಗರ್ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು. ಕೊಣಾಜೆ ಪೊಲೀಸರು " ಹಿಂದು, ಮುಸ್ಲಿಂ, ಕ್ರಿಶ್ಚಿಯನ್ " ಎಂಬ ಬರಹಗಳಿದ್ದ ಜರ್ಸಿ ಧರಿಸಿ ಜನತೆಗೆ ಶಾಂತಿ, ಸಾಮರಸ್ಯದ ಸಂದೇಶ ಸಾರಿದರು.
Ullal police bags Major victory over konaje police in the Cricket Tournament held by Ullal premier league at Ullal in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm