ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm