ಬ್ರೇಕಿಂಗ್ ನ್ಯೂಸ್
22-02-21 12:49 pm Mangalore Correspondent ಕರಾವಳಿ
ಮಂಗಳೂರು, ಫೆ.22: ಕೋವಿಡ್ ನಿರ್ಬಂಧ ನೆಪದಲ್ಲಿ ದಕ್ಷಿಣ ಕನ್ನಡ - ಕೇರಳ ಗಡಿಭಾಗ ತಲಪಾಡಿಯಲ್ಲಿ ಹೈಡ್ರಾಮಾ ನಡೆದಿದೆ. ಒಂದ್ಕಡೆ ಕೇರಳದ ಕಾಸರಗೋಡು ಕಡೆಯಿಂದ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ತಡೆದು ನಿಲ್ಲಿಸಿದರೆ, ಇತ್ತ ಕರ್ನಾಟಕದಿಂದ ಕೇರಳಕ್ಕೆ ತೆರಳುವ ವಾಹನಗಳನ್ನು ತಡೆದು ಗಡಿಭಾಗ ಕಾಸರಗೋಡಿನ ಜನರು ಪ್ರತಿಭಟನೆ ನಡೆಸಿದ್ದಾರೆ.
ಗಡಿಜಿಲ್ಲೆ ಕಾಸರಗೋಡಿನಿಂದ ನಿತ್ಯ ಸಾವಿರಾರು ಮಂದಿ ಮಂಗಳೂರಿಗೆ ಬರುತ್ತಾರೆ. ಏಳೆಂಟು ತಿಂಗಳ ನಿರ್ಬಂಧ ಬಳಿಕ ಮೂರು ತಿಂಗಳ ಹಿಂದಷ್ಟೇ ಅಂತಾರಾಜ್ಯ ಬಸ್ ಸಂಚಾರ ಆರಂಭಗೊಂಡಿತ್ತು. ಈಗ ಮತ್ತೆ ಕೋವಿಡ್ ನೆಪದಲ್ಲಿ ನಿರ್ಬಂಧ ವಿಧಿಸಿದ್ದು ಗಡಿಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ತಡೆ ಹಾಕಿದ್ದನ್ನು ವಿರೋಧಿಸಿ ಜನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ನಿರ್ಬಂಧ ವಿಧಿಸದೆ ಮುಕ್ತ ಪ್ರವೇಶ ನೀಡಬೇಕು. ಇಲ್ಲದೇ ಹೋದರೆ ಕರ್ನಾಟಕದಿಂದ ಕೇರಳಕ್ಕೆ ಬರುವ ವಾಹನಗಳನ್ನೂ ಬಿಡುವುದಿಲ್ಲ ಎಂದು ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ವಿರುದ್ದ ಸ್ಥಳೀಯರು ಧಿಕ್ಕಾರ ಕೂಗಿ ಆಕ್ರೋಶ ತೋರಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು ಬ್ಲಾಕ್ ಆಗಿತ್ತು.

ಕೊನೆಗೆ, ಕೇರಳ ಪೊಲೀಸರು ಗಡಿಗೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಸಿದ್ದಾರೆ. ಪ್ರತಿಭಟನೆ ಕೈಬಿಟ್ಟ ಜನರು, ಇಂದು ಸಂಜೆಯೊಳಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ ಬದಲಿಸಲು ಗಡುವು ನೀಡಿದ್ದಾರೆ. ನಿರ್ಧಾರ ಬದಲಿಸದೇ ಇದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಸದ್ಯ ಎರಡೂ ಕಡೆಗಳಿಂದ ವಾಹನಗಳು ಸಂಚರಿಸುತ್ತಿದ್ದು ಬೆಳಗ್ಗಿನಿಂದ ಮಧ್ಯಾಹ್ನ ವರೆಗಿನ ಹೈಡ್ರಾಮಾಕ್ಕೆ ತೆರೆಬಿದ್ದಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕಕ್ಕೆ ಬರುವ ಜನರನ್ನು ನಿರ್ಬಂಧಿಸಲು ರಾಜ್ಯ ಸರಕಾರ ಕ್ರಮ ಕೈಗೊಂಡಿತ್ತು. ಅಲ್ಲದೆ, ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರಷ್ಟೇ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡುವುದೆಂದು ನಿರ್ಧಾರ ಕೈಗೊಂಡು ಆಯಾ ಜಿಲ್ಲಾಡಳಿತಗಳಿಂದ ಅನುಷ್ಠಾನ ಕ್ರಮಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ, ದ.ಕ. ಜಿಲ್ಲಾಡಳಿತ ಗಡಿಜಿಲ್ಲೆ ಕಾಸರಗೋಡು ಭಾಗದಿಂದ ಬರುವ ಒಳ ರಸ್ತೆಗಳನ್ನು ತಡೆದು ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ ಮಾತ್ರ ಜನರ ಪ್ರವೇಶಕ್ಕೆ ಅನುಮತಿ ನೀಡಿತ್ತು. ಅಲ್ಲದೆ, ಜನರು 72 ಗಂಟೆಗಳ ಮೊದಲು ಪಡೆದ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕೆಂದು ಸೂಚಿಸಿತ್ತು. ಈ ನಿರ್ಧಾರಕ್ಕೆ ಕಾಸರಗೋಡು ಜಿಲ್ಲೆಯ ಜನರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಸದ್ಯಕ್ಕೆ ಗಡಿಭಾಗದಲ್ಲಿ ಸಂಚಾರ ಮುಕ್ತ ಆಗಿದ್ದು ಜಿಲ್ಲಾಡಳಿತಕ್ಕೆ ಪರಿಸ್ಥಿತಿ ನಿಭಾಯಿಸುವುದು ಸವಾಲಾಗಿ ಪರಿಣಮಿಸಿದೆ.
Video:
As DC has ordered ban of entry of Keralites into Mangalore due to covid second wave students and public protest near Tapapdy Toll gate demanding their entry into city.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm