ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.
ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm