ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm