ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm