ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm