ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.
ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am