ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm