ಬ್ರೇಕಿಂಗ್ ನ್ಯೂಸ್
24-02-21 11:39 am Mangalore Correspondent ಕರಾವಳಿ
ಉಳ್ಳಾಲ, ಫೆ.24: ತೊಕ್ಕೊಟ್ಟಿನ ಒಳಪೇಟೆಯ ಮಾರುಕಟ್ಟೆ ಬಳಿ ರೈಲ್ವೇ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮೂರು ಬೀಫ್ ಸ್ಟಾಲ್ ಗಳನ್ನು ತೆರವುಗೊಳಿಸುವಂತೆ ವಿಶ್ವ ಹಿಂದು ಪರಿಷತ್ ಬಜರಂಗದಳ ಉಳ್ಳಾಲ ಪ್ರಖಂಡವು ಪೊಲೀಸರಿಗೆ ಮತ್ತೆ ಆಗ್ರಹಿಸಿದೆ.
ಕಳೆದ ಜನವರಿ ತಿಂಗಳಲ್ಲಿ ಇದೇ ಮೂರು ಬೀಫ್ ಸ್ಟಾಲ್ ಗಳ ತೆರವಿಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳವು ಉಳ್ಳಾಲ ಠಾಣೆಗೆ ದೂರು ನೀಡಿದ ಬೆನ್ನಲ್ಲೆ ಜನವರಿ 8 ರ ರಾತ್ರಿ ದುಷ್ಕರ್ಮಿಯೊಬ್ಬ ಬೀಫ್ ಸ್ಟಾಲ್ ಗಳಿಗೆ ಬೆಂಕಿಹಚ್ಚಿದ ಪ್ರಕರಣ ತೀವ್ರ ಸ್ವರೂಪ ಪಡೆದಿತ್ತು. ಒತ್ತಡಕ್ಕೆ ಬಿದ್ದ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಬೆಂಕಿ ಇಟ್ಟ ಆರೋಪಿಯನ್ನು ಬಂಧಿಸಿದ್ದರು.

ಸುಟ್ಟು ಹೋಗಿದ್ದ ಬೀಫ್ ಸ್ಟಾಲ್ ಗಳನ್ನು ಉಳ್ಳಾಲ ನಗರಸಭೆ ಆಡಳಿತವು ಮತ್ತೆ ಪುನರ್ ನಿರ್ಮಿಸಿ ಕೊಟ್ಟಿದ್ದು ಇದೀಗ ಬೀಫ್ ವ್ಯವಹಾರ ನಡೆಯುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು ಈ ಬಗ್ಗೆ ಹಲವು ಮಾನದಂಡಗಳನ್ನು ಸರಕಾರ ವಿಧಿಸಿದೆ. ಆದರೆ ಉಳ್ಳಾಲ ವ್ಯಾಪ್ತಿಯಲ್ಲಿ ಈ ಕಾನೂನು ಎಲ್ಲಿಯೂ ಅನ್ವಯವಾಗದೆ ಅಕ್ರಮ ಕಸಾಯಿಖಾನೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ.

ತೊಕ್ಕೊಟ್ಟು ಒಳಪೇಟೆಯ ಮೂರು ಬೀಫ್ ಸ್ಟಾಲ್ ಗಳು ಪರವಾನಿಗೆ ಇಲ್ಲದೆ ವ್ಯವಹಾರ ನಡೆಸುತ್ತಿದ್ದರೂ ಕ್ರಮ ಯಾಕಿಲ್ಲ ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಕೇಳುತ್ತಿದ್ದಾರೆ. ಪೊಲೀಸರು ಒಳಪೇಟೆಯ 3 ಅಕ್ರಮ ಕಸಾಯಿ ಖಾನೆಗಳು ಮತ್ತು ಇಲ್ಲಿಗೆ ಅಕ್ರಮವಾಗಿ ಗೋಮಾಂಸ ಸರಬರಾಜು ಮಾಡುವ ವಾಹನ ಮತ್ತು ಕಸಾಯಿಖಾನೆಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಜರಂಗದಳವು ಮತ್ತೆ ಆಗ್ರಹಿಸಿದ್ದು ಉಳ್ಳಾಲ ಪೊಲೀಸರಿಗೆ ಮನವಿ ನೀಡಿದ್ದಾರೆ.

ಈ ಬಗ್ಗೆ ಲಿಖಿತ ದೂರನ್ನು ವಿಶ್ವ ಹಿಂದು ಪರಿಷತ್, ಬಜರಂಗದಳ ಮುಖಂಡರು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರಿಗೆ ನೀಡಿದ್ದಾರೆ. ಬಜರಂಗದಳ ಜಿಲ್ಲಾ ಸಹ ಗೋರಕ್ಷ ಪ್ರಮುಖ್ ಪವಿತ್ರ ಕೆರೆಬೈಲು, ಬಜರಂಗದಳ ಪ್ರಖಂಡ ಸಂಚಾಲಕ ಅರ್ಜುನ್, ಪ್ರಖಂಡ ಗೋರಕ್ಷ ಪ್ರಮುಖ್ ರಕ್ಷಿತ್, ಸಾಪ್ತಾಹಿಕ ಪ್ರಮುಖ್ ಕೌಶಿಕ್ ಉಪಸ್ಥಿತರಿದ್ದರು.
ತೊಕ್ಕೊಟ್ಟಿನಲ್ಲಿ ಅಕ್ರಮ ಬೀಫ್ ಸ್ಟಾಲ್ ; ತೆರವಿಗೆ ಆಗ್ರಹಿಸಿ ಬಜರಂಗದಳ ದೂರು
Three Unauthorised beef staffs in Ullal found VHP activists demand serious action against them. A case has been filed at Ullal police station in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm