ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.
ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm