ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm