ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm