ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm