ಬ್ರೇಕಿಂಗ್ ನ್ಯೂಸ್
26-02-21 02:04 pm Mangalore Correspondent ಕರಾವಳಿ
ಮಂಗಳೂರು, ಫೆ.26 : ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಾಲಿನ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳ ಮೂಲದ ಹಳ್ಳಿಗಾಡಿನ ಯುವತಿ ಚೇತನಾ ಉತ್ತೀರ್ಣರಾಗಿದ್ದು ಕಿರಿಯ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯ ಹುದ್ದೆಗೇರಿದ್ದಾರೆ.
29ರ ಹರೆಯದ ಚೇತನಾ, ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿಯಾಗಿದ್ದು ರಾಮಣ್ಣ ಪೂಜಾರಿ ಮತ್ತು ಸೀತಾ ದಂಪತಿಯ ನಾಲ್ವರು ಮಕ್ಕಳ ಪೈಕಿ ಎರಡನೆಯವರು. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿ ಸಮೀಪದ ಸರಕಾರಿ ಪೆರ್ನೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಮುಗಿಸಿದ ಅವರು ಏಳನೇ ತರಗತಿ ಶಿಕ್ಷಣವನ್ನು ಕನ್ಯಾಡಿ ಸರಕಾರಿ ಶಾಲೆಯಲ್ಲಿ ಪೂರೈಸಿದ್ದರು. ಪ್ರೌಢಶಾಲಾ ಶಿಕ್ಷಣವನ್ನು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಪಡೆದರೆ, ಪದವಿ ಪೂರ್ವ ಶಿಕ್ಷಣವನ್ನು ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿದ್ದರು. ಬಳಿಕ ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ 2016ನೇ ಇಸವಿಯಲ್ಲಿ ಕಾನೂನು ಪದವಿ ಮುಗಿಸಿದ್ದರು.
ಕಾನೂನು ಪದವಿ ಬಳಿಕ ಬೆಳ್ತಂಗಡಿಯ ವಕೀಲ ಕೇಶವ ಪಿ. ಬೆಳಾಲು ಅವರ ಕಚೇರಿಯಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ಅವರ ಜೊತೆ ಲಾ ಕ್ಲಾರ್ಕ್ ರೀಸರ್ಚ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದರು. ಕಳೆದ ಒಂದು ವರ್ಷದಿಂದ ಬೆಂಗಳೂರಿನ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದರು. ಈ ಬಾರಿ ಸಿವಿಲ್ ಜಡ್ಜ್ ಪರೀಕ್ಷೆ ಬರೆದು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
Two woman advocates, Sparsha M D'Souza, Chethana from Dakshian Kannada district, have been chosen as civil judges after clearing the examination held recently for recruitment as judges.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm