ಬ್ರೇಕಿಂಗ್ ನ್ಯೂಸ್
26-02-21 05:47 pm Mangalore Correspondent ಕರಾವಳಿ
ಮಂಗಳೂರು, ಫೆ.26: ಉಳ್ಳಾಲದ ಬಿಲ್ಲವ ವೇದಿಕೆಯವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬ್ರಹ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಬಿಲ್ಲವರಲ್ಲೇ ಒಡಕು ಮೂಡಿಸಿದೆ. ರಾಜಕೀಯ ಮುಖಂಡನೊಬ್ಬನನ್ನು ಬ್ರಹ್ಮಶ್ರೀ ಎನ್ನುವ ಪ್ರತಿಷ್ಠಿತ ಹೆಸರಿನ ಪ್ರಶಸ್ತಿಗೆ ಪರಿಗಣಿಸಿದ್ದರ ಹಿಂದೆ ಯಾವ ಮಾನದಂಡ ಇದೆ ಎಂದು ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದೆ.


ಇತ್ತೀಚೆಗಷ್ಟೇ ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನ ಮಾಡಿದ್ದು, ಆ ಬಗ್ಗೆ ಬಿಲ್ಲವ ಸಮುದಾಯ ಕೆರಳಿ ಕೆಂಡವಾಗಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದೂ ಆಗಿತ್ತು. ಈ ವಿಚಾರದಲ್ಲಿ ಜಗದೀಶ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದಲೇ ಕಿತ್ತು ಹಾಕಬೇಕೆಂಬ ಆಗ್ರಹವೂ ಕೇಳಿಬಂದಿತ್ತು. ಆದರೆ, ಬಿಜೆಪಿ ಮುಖಂಡರಾಗಲೀ, ಪಕ್ಷದ ವತಿಯಿಂದಾಗಲೀ ಈ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ಇಂಥ ಸಂದರ್ಭದಲ್ಲಿಯೇ ಬಿಲ್ಲವರಲ್ಲದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಬಿಲ್ಲವ ವೇದಿಕೆ ಕೊಡಮಾಡುವ ಪ್ರಶಸ್ತಿಗೆ ಪರಿಗಣಿಸಿದ್ದು ಬಿಲ್ಲವರಲ್ಲಿ ಅಸಮಾಧಾನ ಮೂಡಿಸಿದೆ.


ಈ ಬಗ್ಗೆ ನಮ್ಮ ಬಿಲ್ಲವರು ಅನ್ನುವ ಫೇಸ್ಬುಕ್ ಪೇಜಿನಲ್ಲಿ ಭಾರೀ ಟೀಕೆ ವ್ಯಕ್ತವಾಗಿದ್ದು, ಬಿಲ್ಲವರಿಗೆ ಯಾವುದೇ ಕೊಡುಗೆ ನೀಡದ ನಳಿನ್ ಕುಮಾರ್ ಹೆಸರನ್ನು ಆಯ್ಕೆ ಮಾಡಿದ ಉಳ್ಳಾಲದ ಬಿಲ್ಲವ ವೇದಿಕೆಯ ಅಧ್ಯಕ್ಷ ಕೆ.ಟಿ. ಸುವರ್ಣ ವಿರುದ್ಧ ಆಕ್ರೋಶ ತಿರುಗಿದೆ. ಕೆ.ಟಿ. ಸುವರ್ಣ ಅವರಿಗೆ ತಿಂಗಳ ಹಿಂದೆ ಹಿಂದುಳಿದ ವರ್ಗಗಳ ಆಯೋಗದ ನಿರ್ದೇಶಕ ಸ್ಥಾನ ಲಭಿಸಿತ್ತು. ನಳಿನ್ ಕುಮಾರ್ ಕಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಟಿ.ಸುವರ್ಣ ಅವರನ್ನು ಅದೇ ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಇದೀಗ ಋಣ ಸಂದಾಯವೋ ಏನೋ ಎಂಬಂತೆ ಕೆ.ಟಿ.ಸುವರ್ಣ, ನಳಿನ್ ಕುಮಾರ್ ಅವರನ್ನು ತಾವು ಅಧ್ಯಕ್ಷರಾಗಿರುವ ಬಿಲ್ಲವ ವೇದಿಕೆಯಿಂದ ಕೊಡುವ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಇದಕ್ಕಾಗಿ ಈ ಪರಿ ಬಕೆಟ್ ಹಿಡಿಯಬಾರದಿತ್ತು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಬಿಲ್ಲವರ ಅವಹೇಳನ ಮಾಡಿದ ಜಗದೀಶ ಅಧಿಕಾರಿಯ ಹೇಳಿಕೆ ಬಗ್ಗೆ ಸೊಲ್ಲೆತ್ತದ ನಾಯಕನಿಗೆ ಬಿಲ್ಲವರಿಂದಲೇ ಪ್ರಶಸ್ತಿಯೇ ? ಬಿಲ್ಲವ ನಾಯಕರನ್ನು ತುಳಿದಂತಹ ವ್ಯಕ್ತಿಗೆ ಈ ರೀತಿಯ ಗೌರವವೇ ? ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಲು ಸಾಧ್ಯವಾಗಿಲ್ಲ. ಬಿಲ್ಲವ ಈಡಿಗ ಅಭಿವೃದ್ಧಿ ನಿಗಮ ಮಾಡಲು ಸಾಧ್ಯವಾಗಿಲ್ಲ. ಜಿಲ್ಲೆಯ ಬಿಲ್ಲವರ ಬಗ್ಗೆ ಅಭಿವೃದ್ಧಿಗೆ ಯಾವೊಂದು ಕೊಡುಗೆಯನ್ನೂ ನೀಡದ ವ್ಯಕ್ತಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಪ್ರಶಸ್ತಿ ನೀಡುವುದೇ ಎಂದು ನಳಿನ್ ಕುಮಾರ್ ವಿರುದ್ಧ ಖಂಡ ತುಂಡವಾಗಿ ಟೀಕಿಸಿ ಬರೆಯಲಾಗಿದೆ.


ಈ ಹಿಂದೆ ಉಳ್ಳಾಲದ ಬಿಲ್ಲವ ವೇದಿಕೆಯಿಂದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ ,ನವೀನ್ ಡಿ ಪಡೀಲ್,ಖ್ಯಾತ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಇವರು ಮೂವರು ಬಿಲ್ಲವರೇ ಆಗಿದ್ದು, ಈ ಬಾರಿ ಮಾತ್ರ ರಾಜಕೀಯ ನಾಯಕನನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಬಿಲ್ಲವರಲ್ಲಿ ಒಡಕು ಮೂಡಿಸಿದೆ. ಜಗದೀಶ ಅಧಿಕಾರಿಯ ಪ್ರಕರಣದ ಬಳಿಕ ನಳಿನ್ ಕುಮಾರ್ ಮತ್ತು ಬಿಜೆಪಿಯ ಜಿಲ್ಲೆಯ ನಾಯಕರ ಬಗ್ಗೆ ಬಿಲ್ಲವರಲ್ಲೇ ಅಸಮಾಧಾನ ಮೂಡಿದ್ದು ಇಂಥ ಸಂದರ್ಭದಲ್ಲೇ ಬಿಲ್ಲವರ ಪ್ರಶಸ್ತಿಗೆ ನಳಿನ್ ಹೆಸರನ್ನು ಆಯ್ಕೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿಯ ಪ್ರಶಸ್ತಿಗಳಿಗೆ ರಾಜಕೀಯ ರಹಿತ ಸಾಧಕ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಕೆಲವರು ಸಲಹೆಯನ್ನೂ ಮಾಡಿದ್ದಾರೆ.
ಅಂದಹಾಗೆ, ಈ ಪ್ರಶಸ್ತಿಯನ್ನು ಫೆ.28ರಂದು ತೊಕ್ಕೊಟ್ಟು ಕಾಪಿಕಾಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಬಿಲ್ಲವ ವೇದಿಕೆ ಈಗಾಗ್ಲೇ ನಿರ್ಧಾರ ಮಾಡಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಲ್ಲವ ವೇದಿಕೆಯಿಂದ "ಬ್ರಹ್ಮಶ್ರೀ" ಪ್ರಶಸ್ತಿ
The Mangalore Billava community people are now opposing Brahmashree Award that has been conferred to Naleen Kumar Kateel.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm