ಬ್ರೇಕಿಂಗ್ ನ್ಯೂಸ್
27-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.27: ಆರೋಪಿಗಳಿಗೆ ಸೇರಿದ ಕಾರನ್ನು ಮಾರಾಟ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಆರೋಪ ಕೇಳಿಬಂದ ಇಬ್ಬರು ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.

ಈ ಹಿಂದೆ ಮಂಗಳೂರು ಸಿಸಿಬಿ ತಂಡದಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಳೆದ ಅಕ್ಟೋಬರ್ 16ರಂದು ಮಂಗಳೂರಿನ ನಾರ್ಕೋಟಿಕ್ ಠಾಣೆಯಲ್ಲಿ ಹಣ ಡಬ್ಲಿಂಗ್ ಜಾಲದ ಆರೋಪದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಇಬ್ಬರನ್ನು ಸಿಸಿಬಿ ತಂಡ ಬಂಧಿಸಿದ್ದು, ಆರೋಪಿಗಳಿಗೆ ಸೇರಿದ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ಆದರೆ, ಆರೋಪಿಗಳನ್ನು ಪ್ರಕರಣದಿಂದ ಬಚಾವ್ ಮಾಡಲೆಂದು ಹಣ ಕೇಳಿದ್ದಾರೆ ಎನ್ನಲಾಗಿದ್ದು, ಹಣ ಇಲ್ಲದ್ದಕ್ಕೆ ಕಾರು ಮಾರಾಟ ಮಾಡುವಂತೆ ಡೀಲ್ ಆಗಿತ್ತು. ಇದೆಲ್ಲ ನಡೆದು ವಾರ ಕಳೆಯುವಷ್ಟರಲ್ಲಿ ಎಸ್ಐ ಕಬ್ಬಾಳರಾಜ್ ಮಂಗಳೂರಿನಿಂದ ಚಿಕ್ಕಮಗಳೂರಿಗೆ ವರ್ಗ ಆಗಿದ್ದರು. ಇವರಿಗೆ ಸಾಥ್ ನೀಡಿದ್ದಾರೆ ಎನ್ನಲಾಗಿದ್ದ ಅಂದಿನ ಕಮಿಷನರ್ ವಿಕಾಸ್ ಕುಮಾರ್ ಕೂಡ ವರ್ಗ ಆಗಿದ್ದರು. ಆದರೆ, ಕಾರು ಡೀಲಿಂಗ್ ಪ್ರಕರಣ ತಿಂಗಳ ನಂತರ ಲೀಕ್ ಆಗಿದ್ದು, ಈಗ ಮಂಗಳೂರು ಪೊಲೀಸರಿಗೆ ಭಾರೀ ಮುಜುಗರ ತಂದಿಟ್ಟಿದೆ.

ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ರಾಜ್ಯದ ಪೊಲೀಸ್ ವರಿಷ್ಠರಿಗೆ ವರದಿ ನೀಡಿದ್ದು, ಅದರಂತೆ ಇಬ್ಬರು ಅಧಿಕಾರಿಗಳನ್ನು ಪ್ರಾಥಮಿಕ ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಹಣ ಡಬ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಾರು ಡೀಲಿಂಗ್ ಪ್ರಕರಣದಲ್ಲಿ ಎಸಿಪಿ ದರ್ಜೆಯ ಒಬ್ಬ ಅಧಿಕಾರಿ ಮತ್ತು ಸಿಸಿಬಿಯಲ್ಲಿದ್ದ ಕೆಲವು ಅಧಿಕಾರಿಗಳ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಾಗಲೇ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದವರ ಸರದಿ ಇನ್ನಷ್ಟೇ ಇದೆ ಎನ್ನುವ ಅಂಶವನ್ನು ಪೊಲೀಸ್ ಮೂಲಗಳು ತಿಳಿಸಿವೆ.
Luxury car missing in CCB Police Custody Two Police officers Kabbal Raj and Ramkrishana has been suspended. The order has been issued by DGP, Karnataka.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm