ಬ್ರೇಕಿಂಗ್ ನ್ಯೂಸ್
27-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.27: ಆರೋಪಿಗಳಿಗೆ ಸೇರಿದ ಕಾರನ್ನು ಮಾರಾಟ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಆರೋಪ ಕೇಳಿಬಂದ ಇಬ್ಬರು ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.

ಈ ಹಿಂದೆ ಮಂಗಳೂರು ಸಿಸಿಬಿ ತಂಡದಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಳೆದ ಅಕ್ಟೋಬರ್ 16ರಂದು ಮಂಗಳೂರಿನ ನಾರ್ಕೋಟಿಕ್ ಠಾಣೆಯಲ್ಲಿ ಹಣ ಡಬ್ಲಿಂಗ್ ಜಾಲದ ಆರೋಪದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಇಬ್ಬರನ್ನು ಸಿಸಿಬಿ ತಂಡ ಬಂಧಿಸಿದ್ದು, ಆರೋಪಿಗಳಿಗೆ ಸೇರಿದ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ಆದರೆ, ಆರೋಪಿಗಳನ್ನು ಪ್ರಕರಣದಿಂದ ಬಚಾವ್ ಮಾಡಲೆಂದು ಹಣ ಕೇಳಿದ್ದಾರೆ ಎನ್ನಲಾಗಿದ್ದು, ಹಣ ಇಲ್ಲದ್ದಕ್ಕೆ ಕಾರು ಮಾರಾಟ ಮಾಡುವಂತೆ ಡೀಲ್ ಆಗಿತ್ತು. ಇದೆಲ್ಲ ನಡೆದು ವಾರ ಕಳೆಯುವಷ್ಟರಲ್ಲಿ ಎಸ್ಐ ಕಬ್ಬಾಳರಾಜ್ ಮಂಗಳೂರಿನಿಂದ ಚಿಕ್ಕಮಗಳೂರಿಗೆ ವರ್ಗ ಆಗಿದ್ದರು. ಇವರಿಗೆ ಸಾಥ್ ನೀಡಿದ್ದಾರೆ ಎನ್ನಲಾಗಿದ್ದ ಅಂದಿನ ಕಮಿಷನರ್ ವಿಕಾಸ್ ಕುಮಾರ್ ಕೂಡ ವರ್ಗ ಆಗಿದ್ದರು. ಆದರೆ, ಕಾರು ಡೀಲಿಂಗ್ ಪ್ರಕರಣ ತಿಂಗಳ ನಂತರ ಲೀಕ್ ಆಗಿದ್ದು, ಈಗ ಮಂಗಳೂರು ಪೊಲೀಸರಿಗೆ ಭಾರೀ ಮುಜುಗರ ತಂದಿಟ್ಟಿದೆ.

ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ರಾಜ್ಯದ ಪೊಲೀಸ್ ವರಿಷ್ಠರಿಗೆ ವರದಿ ನೀಡಿದ್ದು, ಅದರಂತೆ ಇಬ್ಬರು ಅಧಿಕಾರಿಗಳನ್ನು ಪ್ರಾಥಮಿಕ ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಹಣ ಡಬ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಾರು ಡೀಲಿಂಗ್ ಪ್ರಕರಣದಲ್ಲಿ ಎಸಿಪಿ ದರ್ಜೆಯ ಒಬ್ಬ ಅಧಿಕಾರಿ ಮತ್ತು ಸಿಸಿಬಿಯಲ್ಲಿದ್ದ ಕೆಲವು ಅಧಿಕಾರಿಗಳ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಾಗಲೇ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದವರ ಸರದಿ ಇನ್ನಷ್ಟೇ ಇದೆ ಎನ್ನುವ ಅಂಶವನ್ನು ಪೊಲೀಸ್ ಮೂಲಗಳು ತಿಳಿಸಿವೆ.
Luxury car missing in CCB Police Custody Two Police officers Kabbal Raj and Ramkrishana has been suspended. The order has been issued by DGP, Karnataka.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm