ಬ್ರೇಕಿಂಗ್ ನ್ಯೂಸ್
27-02-21 03:41 pm Mangalore Correspondent ಕರಾವಳಿ
ಮಂಗಳೂರು, ಫೆ.27: ತನ್ನ ಬಗ್ಗೆ ರಾಜಕೀಯದಲ್ಲಿ ಬಚ್ಚಾ ಎಂದು ಟೀಕಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ತಿರುಗೇಟು ನೀಡಿದ್ದಾರೆ. ಹೌದು.. ನಾನು ರಾಜಕೀಯದಲ್ಲಿ ಬಚ್ಚಾನೇ.. ಕುಮಾರಸ್ವಾಮಿ ಹವಾಯಿ ಚಪ್ಪಲಿ ಹಾಕ್ಕೊಂಡು ರಾಮನಗರಕ್ಕೆ ಬಂದಿದ್ದಾಗಲೂ ಬಚ್ಚಾನೇ ಆಗಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ಬಿನಲ್ಲಿ ಪತ್ರಕರ್ತರ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯೋಗೀಶ್ವರ್, ಕುಮಾರಸ್ವಾಮಿ ಏನಿದ್ದರೂ ಅವಕಾಶವಾದಿ ರಾಜಕಾರಣಿ. ಮೊನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ತಮ್ಮ ಪಕ್ಷದ ಬಸವರಾಜ್ ಹೊರಟ್ಟಿಗೆ ಪರಿಷತ್ ಸಭಾಪತಿ ಸ್ಥಾನ ಕೊಡಿಸಿದ್ದರು. ಈಗ ಮೈಸೂರಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿದ್ದಾರೆ. ಅವರು ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಆಗುತ್ತಾರೆ. ಅವಕಾಶವಾದಿ ರಾಜಕಾರಣಿ ಎಂದು ಮೂದಲಿಸಿದರು.

ಕುಮಾರಸ್ವಾಮಿಗೆ ನೈತಿಕತೆ, ಸಿದ್ಧಾಂತ ಯಾವುದೂ ಇಲ್ಲ. ಸಿಎಂ ಆಗಿದ್ದಾಗ ಉಡಾಫೆಯಾಗಿ ಮಾತನಾಡಿದ್ದರು. ಅಧಿಕಾರದಲ್ಲಿದ್ದಾಗ ಜನರ ಬಳಿ ಹೋಗಲಿಲ್ಲ. ಈಗ ಅವರಿಗೆ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದ್ದು, ದಿನಾ ಬೆಳಗ್ಗೆದ್ದು ಜನರ ಕಡೆ ಹೋಗುತ್ತಿದ್ದಾರೆ. ಕುಮಾರಸ್ವಾಮಿಯವರ ಅವಕಾಶವಾದಿ ಮನಸ್ಥಿತಿಯ ಬಗ್ಗೆ ನಮ್ಮ ಪಕ್ಷದ ವರಿಷ್ಠರಿಗೂ ಎಚ್ಚರಿಸುತ್ತಿದ್ದೇನೆ. ಜನರಿಗೂ ಎಚ್ಚರಿಸುತ್ತಿದ್ದೇನೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ತೊಂದರೆ ಆದೀತು ಎಂದು ಎಚ್ಚರಿಕೆ ನೀಡಿದರು.
ನೀವು ಇಸ್ಪೀಟ್ ಆಡಿದ ಹಣದಲ್ಲಿ ರಾಜ್ಯ ಸರಕಾರವನ್ನು ಬೀಳಿಸಿದ್ದೀರೆಂದು ಕುಮಾರಸ್ವಾಮಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗೀಶ್ವರ್, ಇಸ್ಪೀಟ್ ಬಗ್ಗೆ ನಂಗೆ ಗೊತ್ತೇ ಇಲ್ಲ. ಇಸ್ಪೀಟ್ ಆಡಿಯೂ ಗೊತ್ತಿಲ್ಲ. ಆದರೆ, ಕುಮಾರಸ್ವಾಮಿ ಸಿಂಗಾಪುರದಲ್ಲಿ ಇಸ್ಪೀಟ್ ಆಡಿದ್ದು ಗೊತ್ತು. ಅದರ ಫೋಟೋ ಬೇಕಾದರೆ ನನ್ನಲ್ಲಿ ಇವೆ, ಬಿಡುಗಡೆ ಮಾಡಲು ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
Minister for Environment, Ecology and Tourism C P Yogeshwar in Mangalore alleged that former chief minister (CM) H D Kumaraswamy used to gamble in Singapore and Malaysia.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm