ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm