ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm