ಬ್ರೇಕಿಂಗ್ ನ್ಯೂಸ್
 
            
                        28-02-21 11:36 pm Mangaluru Correspondent ಕರಾವಳಿ
 
            ಮಂಗಳೂರು, ಫೆ.28: ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಅಕ್ರಮ ಮರಳು ಸಾಗಣೆಯ ವಿರುದ್ಧ ಸಮರ ಸಾರಿದ್ದಾರೆ. ಉಳ್ಳಾಲ, ಕೊಣಾಜೆಯ ಗಡಿಭಾಗದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ತಯಾರಿ ನಡೆಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಡಿಸಿಪಿ ಹರಿರಾಮ್ ಶಂಕರ್, ಗಡಿಭಾಗದಲ್ಲಿ ಅಕ್ರಮ ಮರಳು ಸಾಗಾಟ ವ್ಯವಸ್ಥಿತವಾಗಿ ನಡೆಯುತ್ತದೆ. ಪೊಲೀಸರು ಇಲ್ಲದ ಸಂದರ್ಭದಲ್ಲಿ ಟೋಲ್ ಗೇಟ್, ಚೆಕ್ ಪೋಸ್ಟ್ ಗಳಿಂದಲೇ ಮರಳಿನ ಟಿಪ್ಪರ್ ಲಾರಿಯನ್ನು ಸಾಗಿಸಲಾಗುತ್ತದೆ. ಇದಕ್ಕಾಗಿ ಅಕ್ರಮ ಮರಳು ದಂಧೆಕೋರರು ತಲಪಾಡಿ ಚೆಕ್ಪೋಸ್ಟ್ ಪಕ್ಕದ ಖಾಲಿ ಮೈದಾನಗಳಲ್ಲಿ ಮರಳನ್ನು ರಾಶಿ ಹಾಕಿಡುತ್ತಾರೆ. ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಇಲ್ಲದ ಸಂದರ್ಭಗಳಲ್ಲಿ ಮರಳನ್ನು ತಕ್ಷಣ ಗಡಿ ಭಾಗದಿಂದ ಕೇರಳಕ್ಕೆ ಸಾಗಾಟ ಮಾಡುತ್ತಾರೆ. ಇದು ಬಹಳ ಯೋಜನಾಬದ್ಧ ಪ್ರಕ್ರಿಯೆಯಾಗಿದ್ದು, ಟೋಲ್ಗೇಟ್ ಸಿಬ್ಬಂದಿಯೂ ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ. ಪೊಲೀಸರು ನಸುಕಿನ ಹೊತ್ತಲ್ಲಿ ಟೋಲ್ ಗೇಟ್ ಬಳಿಯಿಂದ ನಿರ್ಗಮಿಸುವ ವಿಚಾರವನ್ನು ದಂಧೆಕೋರರಿಗೆ ರವಾನಿಸುತ್ತಿದ್ದರು ಎಂದು ಹೇಳಿದ್ದಾರೆ.



ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ಹಾಕಲಾಗುತ್ತದೆ. ಅದಕ್ಕಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಚರ್ಚಿಸಿ, ತಂತ್ರಜ್ಞಾನದ ನೆರವು ಪಡೆಯಲಾಗುವುದು. ಕೊಣಾಜೆಯಲ್ಲಿ ಮೊದಲೇ ಸಿಬಂದಿ ಕೊರತೆಯಿದ್ದು ಇದಕ್ಕೆಂದು ಮತ್ತೆ ಸಿಬಂದಿ ನೀಡಲು ಸಾಧ್ಯವಾಗಲ್ಲ. ಅದಕ್ಕಾಗಿ ಜಿಪಿಎಸ್ ಇನ್ನಿತರ ತಂತ್ರಜ್ಞಾನ ಮೂಲಕ ಮರಳಿನ ಅಕ್ರಮ ಸಾಗಾಟಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಹೇಳಿದರು.
ಮೊನ್ನೆ ಕಾರ್ಯಾಚರಣೆ ನಡೆದಾಗ ಎರಡು ಕಾರುಗಳು ಲಾರಿಗಳಿಗೆ ಎಸ್ಕಾರ್ಟ್ ಮಾಡುತ್ತಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸರು ಕಾರನ್ನು ಬೆನ್ನಟ್ಟಿದ್ದಾರೆ. ಈ ಸಂದರ್ಭ ಪೊಲೀಸರನ್ನು ದೂಡಿ ಹಾಕಿ, ಕಾರಿನಲ್ಲಿದ್ದವರು ಎಸ್ಕೇಪ್ ಆಗಿದ್ದಾರೆ. ಈ ಬಗ್ಗೆ ಏಳು ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. ಮರಳು ಸಾಗಿಸುತ್ತಿದ್ದ ಲಾರಿ ಮತ್ತು ಮರಳನ್ನು ವಶಕ್ಕೆ ಪಡೆಯಲಾಗಿದೆ.
 
            
            
            Talapady toll gate staff involved behind illegal sand transportation states Mangalore DCP Hariram Shanker. A suo motu case has been registered by the police against 10 people over alleged illegal sand transporation after a truck was seized at Talapady.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm