ಬ್ರೇಕಿಂಗ್ ನ್ಯೂಸ್
19-08-20 10:51 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೆಲವು ವಿಚಾರದಲ್ಲಿ ದೇವರು ಕೊಟ್ಟರೂ, ಪೂಜಾರಿ ಕೊಡಲ್ಲ ಎನ್ನುತ್ತಾರೆ. ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ವಿಚಾರದಲ್ಲೂ ಅದೇ ಆಗಿದೆ. ಹೈಕೋರ್ಟ್ ಅನುಮತಿ ಪಡೆದು ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಮತ್ತೆ ವ್ಯಾಪಾರ ಆರಂಭಿಸಲು ಮುಂದಾಗಿದ್ದರು. ಆದರೆ, ಈಗ ಜಿಲ್ಲಾಧಿಕಾರಿಯೇ ವ್ಯಾಪಾರಕ್ಕೆ ತಡೆ ಹಾಕಿದ್ದು ಕೋವಿಡ್ ಹರಡುವ ನೆಪದಲ್ಲಿ ಸೆಂಟ್ರಲ್ ಮಾರುಕಟ್ಟೆ ಅನಿರ್ದಿಷ್ಟವಾಗಿ ಬಂದ್ ಮಾಡುವಂತೆ ಆದೇಶ ಮಾಡಿದ್ದಾರೆ.
ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆ ಪ್ರದೇಶದಲ್ಲಿ ದಿನವೂ ಹೊರ ರಾಜ್ಯದ ಸೇರಿ ಸಾವಿರಾರು ವಾಹನಗಳು ಬಂದು ಹೋಗುತ್ತವೆ. ದಿನ ಒಂದರಲ್ಲಿ 1500 ರಿಂದ ಎರಡು ಸಾವಿರದಷ್ಟು ವ್ಯಾಪಾರಸ್ಥರು ಮತ್ತು ಕಾರ್ಮಿಕರು ಸೇರುತ್ತಾರೆ. ಕಾರ್ಮಿಕರಾಗಲೀ, ವ್ಯಾಪಾರಸ್ಥರು ಆಗಲೀ ಯಾವುದೇ ಕೋವಿಡ್ ನಿಯಮ ಪಾಲನೆಯನ್ನು ಮಾಡುತ್ತಿಲ್ಲ. ಮುಖಗವಸು, ಸಾಮಾಜಿಕ ಅಂತರ ಪಾಲನೆ ಮಾಡದಿರುವ ಕಾರಣ ಸೆಂಟ್ರಲ್ ಮಾರುಕಟ್ಟೆ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೆ, ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಅತಿ ಹೆಚ್ಚು 6359 ಸೋಂಕಿತರಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 549 ಮಂದಿಗೆ ಸೋಂಕು ಕಂಡುಬಂದಿದೆ. ಇದೇ ವೇಳೆ ಸೆಂಟ್ರಲ್ ಮಾರುಕಟ್ಟೆ ಪ್ರದೇಶದಲ್ಲಿ 49 ಮಂದಿಗೆ ಸೋಂಕು ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟ 277 ಮಂದಿಯ ಪೈಕಿ 171 ಮಂಗಳೂರಿನವರೇ ಆಗಿದ್ದಾರೆ. ಇವೆಲ್ಲ ಹಿನ್ನೆಲೆಯಲ್ಲಿ ಸೆಂಟ್ರಲ್ ಮಾರುಕಟ್ಟೆ ತೆರೆಯುವುದು ಮತ್ತು ಅಲ್ಲಿ ಜನಜಂಗುಳಿ ಸೇರುವುದು ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಈ ಬಗ್ಗೆ ಆಗಸ್ಟ್ 18ರಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಸೆಂಟ್ರಲ್ ಮಾರುಕಟ್ಟೆಯನ್ನು ಮುಂದಿನ ಆದೇಶದ ವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾಕ್ ಡೌನ್ ಬಳಿಕ ಮುಚ್ಚಿದ್ದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಬೈಕಂಪಾಡಿಯ ಎಪಿಎಂಸಿಯಲ್ಲಿ ವಹಿವಾಟಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಮಾರುಕಟ್ಟೆಯ ವ್ಯಾಪಾರಸ್ಥರು ಹೈಕೋರ್ಟಿಗೆ ದೂರು ಸಲ್ಲಿಸಿ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದರು. ವಾರದ ಹಿಂದಷ್ಟೇ ಹೈಕೋರ್ಟ್, ಮಹಾನಗರ ಪಾಲಿಕೆಯ ತಡೆಯಾಜ್ಞೆ ತೆರವುಗೊಳಿಸಿದ್ದು ವ್ಯಾಪಾರಸ್ಥರು ತಮಗೆ ಸಿಕ್ಕ ಜಯ ಎಂದೇ ಭಾವಿಸಿದ್ದರು. ಕೆಲವು ವ್ಯಾಪಾರಸ್ಥರು ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ವ್ಯಾಪಾರವನ್ನೂ ಆರಂಭಿಸಿದ್ದರು. ಮಹಾನಗರ ಪಾಲಿಕೆಯ ಕಮಿಷನರ್ ಮಾತ್ರ, ಈ ತಡೆಯಾಜ್ಞೆ ತೆರವು ಏನಿದ್ದರೂ ತಾತ್ಕಾಲಿಕ ಎನ್ನುತ್ತಿದ್ದರು. ಇದೀಗ ಜಿಲ್ಲಾಧಿಕಾರಿಯೇ ಕೊರೊನಾ ಕಾರಣ ಮುಂದಿಟ್ಟು ಸೆಂಟ್ರಲ್ ಮಾರುಕಟ್ಟೆಯನ್ನು ಪೂರ್ತಿಯಾಗಿ ಮುಚ್ಚಿಸಿದ್ದಾರೆ. ವ್ಯಾಪಾರಸ್ಥರು ಮತ್ತು ಅಧಿಕಾರಿ ವರ್ಗದ ನಡುವಿನ ತಿಕ್ಕಾಟದಲ್ಲಿ ಮತ್ತೆ ಅಧಿಕಾರಸ್ಥರೇ ಜಯ ಕಂಡುಕೊಂಡಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm